ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದ್ದೇನೆ. ಈ ವೇಳೆ ಅವರಿಗೆ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು ಎಂದು ಸಲಹೆ ನೀಡಿಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು, ಇದರ ಜೊತೆಗೆ ತಪ್ಪು ಮಾಡದವರಿಗೆ ಕೂಡ ತೊಂದರೆ ಆಗಬಾರದು. ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದೇನೆ ಎಂದು ಹೇಳಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…