Mysore
31
overcast clouds

Social Media

ಶುಕ್ರವಾರ, 08 ಮೇ 2026
Light
Dark

ಗೃಹಲಕ್ಷ್ಮೀ ಹಣದಿಂದ ಬೋರ್‌ವೆಲ್‌ ಕೊರೆಸಿರುವ ಮಹಿಳೆಯರು: ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಶ್ಲಾಘನೆ

ಬೆಂಗಳೂರು: ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿ, ಸಮೃದ್ಧವಾದ ನೀರು ಪಡೆದಿದ್ದಾರೆ ಎಂದು ಸುದ್ದಿ ಕೇಳಿ ಸಂತಸವಾಗಿದೆ ಎಂದಿದ್ದಾರೆ.

ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ – ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ. ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಹೇಳಿದ್ದಾರೆ.

Tags:
error: Content is protected !!