ರಾಜ್ಯ

ಗೃಹಲಕ್ಷ್ಮೀ ಹಣದಿಂದ ಬೋರ್‌ವೆಲ್‌ ಕೊರೆಸಿರುವ ಮಹಿಳೆಯರು: ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಶ್ಲಾಘನೆ

ಬೆಂಗಳೂರು: ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿ, ಸಮೃದ್ಧವಾದ ನೀರು ಪಡೆದಿದ್ದಾರೆ ಎಂದು ಸುದ್ದಿ ಕೇಳಿ ಸಂತಸವಾಗಿದೆ ಎಂದಿದ್ದಾರೆ.

ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ – ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ. ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago