ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಅವರು ನಾಳೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಂದಿನ ಸಿಎಂ ಆಗಲಿದ್ದಾರೆ ಎನ್ನುವ ವದಂತಿಗಳು ಹರಿದಾಡುತ್ತಿವೆ.
ರಾಜ್ಯಪಾಲರನ್ನು ಭೇಟಿಯಾಗಲು ನಾಳೆ ಸಮಯ ಕೇಳಿದ್ದಾರೆ ಎಂದು ಸಿಎಂ ಆಪ್ತ ಮೂಲವೊಂದು ತಿಳಿಸಿದೆ. ನಾಳೆ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.





