ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಒಂದೇ ವೇದಿಕೆ ಹಂಚಿಕೊಂಡರು.
ಕೇರಳದಲ್ಲಿ ನಡೆದ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕರ್ನಾಟಕ ಕಾಂಗ್ರೆಸ್ಸಿನ ಉಸ್ತುವಾರಿ ನಾಯಕರು ಆಗಿರುವ ಕೇರಳದವರೇ ಆದ ಕೆ.ಸಿ. ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದೇ ವೇಳೆ ಸಿದ್ದರಾಮಯ್ಯ ಶಿವಗಿರಿ ಮಠದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ ಉಪಸ್ಥಿತರಿದ್ದರು. ಇದೇ ವೇಳೆ ಕೇರಳದ ಮುಖ್ಯಮಂತ್ರಿ ಪೀಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಉಭಯ ಕುಶಲೋಪರಿ ವಿಚಾರಿಸಿದರು.
ಕೋಗಿಲು ಕ್ರಾಸ್ ಬಳಿ ಘನ ತ್ಯಾಜ್ಯ ವಿಲೇವಾರಿಗಾಗಿ ಸರ್ಕಾರ ಸ್ವಾಧೀನ ಪಡಿಸಿಕೊಂಡಿದ್ದ ಭೂಮಿಯಲ್ಲಿ ಕೇರಳ, ತೆಲಂಗಾಣ ಹಾಗೂ ಇತರೆಡೆಗಳಿಂದ ಆಗಮಿಸಿದ ಕೆಲವರು ಭೂ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದರು. ಇದರ ವಿರುದ್ದ ಕ್ರಮ ಕೈಗೊಂಡ ಗ್ರೇಟರ್ ಬೆಂಗಳೂರು ಅಧಿಕಾರಿಗಳು ಆಕ್ರಮ ನಿರ್ಮಾಣಗಳನ್ನು ಧ್ವಂಸಗೊಳಿಸಿ ಒತ್ತುವರಿಯನ್ನು ತೆರವು ಮಾಡಿದ್ದರು. ಅಲ್ಲಿನ ನಿವಾಸಿಗಳು ಸರಕಾರದ ಕ್ರಮವನ್ನು ವಿರೋಧಿಸಿ ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಲ್ಲದೆ, ತಾತ್ಕಾಲಿಕ ಟೆಂಟ್ಗಳನ್ನು ನಿರ್ಮಿಸಿಕೊಂಡು ತಮ್ಮ ಪ್ರತಿರೋಧವನ್ನು ವ್ಯಕ್ತಪಡಿಸಿದ್ದರು.
ಎಂಟು ದಿನಗಳ ಬಳಿಕ ಪೀಣರಾಯಿ ವಿಜಯನ್ ಅವರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿ, ಕರ್ನಾಟಕದ ಸರ್ಕಾರ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದಂತೆ ಬುಲ್ಡೋ ಜೋರ್ ನೀತಿಗಳನ್ನು ಅನುಸರಿಸುತ್ತಿದೆ ಎಂದು ಟೀಕಿಸಿದರು. ಅನಂತರದ ಬೆಳವಣಿಗೆಯಲ್ಲಿ ಕೇರಳದ ಕೆಲ ಶಾಸಕರು, ಸಂಸದರು ಸ್ಥಳಕ್ಕೆ ಭೇಟಿ ನೀಡಿ ಒತ್ತುವರಿ ತೆರವು ಕಾರ್ಯಾಚರಣೆಯಿಂದ ತೊಂದರೆಗೊಳಗಾದವರ ಕಷ್ಟ- ಸುಖಗಳನ್ನು ವಿಚಾರಿಸಿದರು. ಇದು ರಾಜಕೀಯ ತಿರುವನ್ನು ಪಡೆದುಕೊಂಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶ ಮಾಡಿ, ಉಪಮುಖ್ಯಮಂತ್ರಿಯಾಗಿ ಡಿ.ಕೆ .ಶಿವಕುಮಾರ್ ಅವರ ಜೊತೆ ಗ್ರೇಟರ್ ಬೆಂಗಳೂರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಒತ್ತುವರಿಯಿಂದ ಸಂತ್ರಸ್ಥರಾದ ನೈಜ್ಯ ಮಾಲೀಕರುಗಳಿಗೆ ಬದಲಿ ಮನೆಯಲ್ಲಿ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದರು.
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ…
ಏಪ್ರಿಲ್ ತಿಂಗಳ ಹೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳದಲ್ಲಿನ, ಸಿಪಿಐ(ಎಂ)ನ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎ- ಸರ್ಕಾರ, ರಾಜಕೀಯ ಕಾರಣಗಳಿಗಾಗಿ…
ದೂರ ನಂಜುಂಡಸ್ವಾಮಿ ಕಳೆದ ವರ್ಷ ಉಂಟಾದ ನಷ್ಟದಿಂದ ಉತ್ಸಾಹ ತೋರದ ವ್ಯಾಪಾರಿಗಳು; ರೈತರಲ್ಲಿ ಆತಂಕ ದೂರ: ತೋಟಗಾರಿಕೆ ಬೆಳೆಗಳಲ್ಲಿ ಒಂದಾದ…
ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ನಡೆಸಿದ ದೀರ್ಘಾವಧಿ ಆಡಳಿತವನ್ನು ಹಿಂದಿಕ್ಕಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು…
ಹೇಮಂತ್ ಕುಮಾರ್ ಮಂಡ್ಯ: ಈ ಸರ್ಕಾರಿ ಶಾಲೆಗೆ ೧೩೭ ವರ್ಷ... ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ೪೧... ಒಂದು ಕಾಲದಲ್ಲಿ ೫೦೦ಕ್ಕೂ…
ಮಂಜು ಕೋಟೆ ಕೋಟೆ ರಾಜಕೀಯದಲ್ಲಿ ಹೊಸ ಬದಲಾವಣೆ; ಜಾ.ದಳಕ್ಕೆ ಶಾಕ್ ನೀಡಿದ ಮುಖಂಡರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು…