ರಾಜ್ಯ

ಕೇಂದ್ರದ ತಪ್ಪು ನೀತಿಗಳಿಂದಲೇ ಬೆಲೆ ಏರಿಕೆಯಾಗಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರಿಗೆ ನಮ್ಮನ್ನು  ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯ ಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ನ ಕಚ್ಚಾ ತೈಲದ ಬೆಲೆಯ ಮೇಲೆ ದರ ನಿಗದಿಯಾಗುತ್ತದೆ. ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿರುವ ಬಗ್ಗೆ ಜನರು ಪ್ರಶ್ನೆ ಕೇಳಬೇಕಿದೆ ಎಂದರು.

ಇನ್ನು ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 53,11,000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೆ ಸಾಲ ಹೆಚ್ಚಿದೆ. ದೇಶದ ಸಾಲ ಮೊತ್ತ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಎಂದು ಗಂಭೀರ ಆರೋಪ ಮಾಡಿದರು.

ಇನ್ನು ಗ್ಯಾರಂಟಿಗಳಿಂದಲೇ ಆರ್ಥಿಕತೆ ಹಾಳಾಗಿದೆ ಎಂಬ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರ ಸರ್ಕಾರದ ಅವಧಿಯಲ್ಲಿಯೇ ರಾಜ್ಯದ ಆರ್ಥಿಕತೆ ಕುಸಿದಿತ್ತು. ನಾವು ಹಿಂದಿನ ವರ್ಷಕ್ಕಿಂತ ಈ ಸಾಲಿನ ಬಜೆಟ್‌ನ ಪ್ರಮಾಣ ಸುಮಾರು 38 ಸಾವಿರ ಕೋಟಿಯಷ್ಟು ಹೆಚ್ಚಿಸಲಾಗಿದೆ. ಇದು ನಮ್ಮ ಸರ್ಕಾರದ ಆರ್ಥಿಕ ದಿವಾಳಿತನವೇ ಎಂದು ಪ್ರಶ್ನಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

4 mins ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

2 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

3 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

4 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

4 hours ago