ಬೆಂಗಳೂರು: ಸಿಎಂ ಸೊಕ್ಕು ಮುರಿಯಬೇಕು ಎಂದು ಹೇಳಿಕೆ ನೀಡಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮೂರು ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿತ್ತು. ಗೆದ್ದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಸಿದ್ದರಾಮಯ್ಯಗೆ ಅಹಂಕಾರ, ಸಿಎಂ ಸೊಕ್ಕು ಮುರಿಯಬೇಕು ಎಂದು ದೇವೇಗೌಡರು ಹೇಳಿದ್ದರು. ಅಧಿಕಾರದಿಂದ ಕಾಂಗ್ರೆಸ್ ತೆಗೆಯುವುದೇ ನನ್ನ ಉದ್ದೇಶ ಎಂದಿದ್ದರು. ಆದರೆ ಕಳೆದ 40 ವರ್ಷಗಳಿಂದ ಎಂದೂ ಕೂಡ ದರ್ಪ ತೋರಿಲ್ಲ. ಅಧಿಕಾರದಲ್ಲಿ ಇದ್ದರೂ, ಇಲ್ಲದಿದ್ದರೂ ಒಂದೇ ರೀತಿ ಇರುತ್ತೇನೆ. ಅಳೋದನ್ನು ದೊಡ್ಡಗೌಡರ ಕುಟುಂಬ ಅಭ್ಯಾಸ ಮಾಡಿಕೊಂಡಿದ್ದಾರೆ ಎಂದು ದೇವೇಗೌಡರ ಕುಟುಂಬದ ವಿರುದ್ಧ ಲೇವಡಿ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡಿದರು. ಮುಡಾ ಹಾಗೂ ವಾಲ್ಮೀಕಿ ಪ್ರಕರಣಗಳಲ್ಲಿ ನನ್ನ ಪಾತ್ರವಿದೆ ಎಂದು ಪದೇ ಪದೇ ಆರೋಪಿಸುತ್ತಿದ್ದರು. ವಕ್ಫ್ ವಿವಾದದಲ್ಲಿ ಕೋಮುವಾದ ಸೃಷ್ಟಿಸಿದ್ದರು. ಆದರೆ ಜನತೆ ಈ ಎಲ್ಲಾ ಆರೋಪಗಳನ್ನು ತಿರಸ್ಕರಿಸಿ ನಮಗೆ ಗೆಲುವು ತಂದುಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರಿಗೆ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡಿದೆ. ವಾಹನ ಮುಂದೆ…
ಸಿದ್ದಾಪುರ : ಮಾಲ್ದಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲ್ದಾರೆ–ಗುಡ್ಲೂರು ರಸ್ತೆ ಹಾಗೂ ಮೈಲಾಪುರ–ಗುಡ್ಲೂರು ರಸ್ತೆ ಕಾಮಗಾರಿಗಳು ಪೂರ್ಣಗೊಂಡಿದ್ದರೂ, ಕಾಮಗಾರಿಯಲ್ಲಿ ಬಳಸಿದ…
ಬೆಂಗಳೂರು : ಪಶ್ಚಿಮ ಕೊಲ್ಲಿ ರಾಷ್ಟ್ರಗಳ ಯುದ್ಧದಿಂದಾಗಿ ಇದೀಗ ದೇಶದಲ್ಲಿ ಅನಿಲ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ…
24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…