ಬೆಂಗಳೂರು: ಸಿಎಂ ಸೊಕ್ಕು ಮುರಿಯಬೇಕು ಎಂದು ಹೇಳಿಕೆ ನೀಡಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮೂರು ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿತ್ತು. ಗೆದ್ದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ಸಿದ್ದರಾಮಯ್ಯಗೆ ಅಹಂಕಾರ, ಸಿಎಂ ಸೊಕ್ಕು ಮುರಿಯಬೇಕು ಎಂದು ದೇವೇಗೌಡರು ಹೇಳಿದ್ದರು. ಅಧಿಕಾರದಿಂದ ಕಾಂಗ್ರೆಸ್ ತೆಗೆಯುವುದೇ ನನ್ನ ಉದ್ದೇಶ ಎಂದಿದ್ದರು. ಆದರೆ ಕಳೆದ 40 ವರ್ಷಗಳಿಂದ ಎಂದೂ ಕೂಡ ದರ್ಪ ತೋರಿಲ್ಲ. ಅಧಿಕಾರದಲ್ಲಿ ಇದ್ದರೂ, ಇಲ್ಲದಿದ್ದರೂ ಒಂದೇ ರೀತಿ ಇರುತ್ತೇನೆ. ಅಳೋದನ್ನು ದೊಡ್ಡಗೌಡರ ಕುಟುಂಬ ಅಭ್ಯಾಸ ಮಾಡಿಕೊಂಡಿದ್ದಾರೆ ಎಂದು ದೇವೇಗೌಡರ ಕುಟುಂಬದ ವಿರುದ್ಧ ಲೇವಡಿ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡಿದರು. ಮುಡಾ ಹಾಗೂ ವಾಲ್ಮೀಕಿ ಪ್ರಕರಣಗಳಲ್ಲಿ ನನ್ನ ಪಾತ್ರವಿದೆ ಎಂದು ಪದೇ ಪದೇ ಆರೋಪಿಸುತ್ತಿದ್ದರು. ವಕ್ಫ್ ವಿವಾದದಲ್ಲಿ ಕೋಮುವಾದ ಸೃಷ್ಟಿಸಿದ್ದರು. ಆದರೆ ಜನತೆ ಈ ಎಲ್ಲಾ ಆರೋಪಗಳನ್ನು ತಿರಸ್ಕರಿಸಿ ನಮಗೆ ಗೆಲುವು ತಂದುಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…