siddaramaiah
ಬೆಂಗಳೂರು : ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗುತ್ತೇವೆ ಎಂದರು.
ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ. ಅಂಬೇಡ್ಕರ್ ಅವರು ಕೊಟ್ಟಂತಹ ಸಂವಿಧಾನವನ್ನೂ ಎಲ್ಲರೂ ಪಾಲಿಸಬೇಕು ಎಂದರು.
ಜಾತಿ, ವರ್ಗ ಮುಕ್ತ ಸಮ ಸಮಾಜ ನಿರ್ಮಾಣ ಆಗಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದರು.
1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಹಣಕಾಸು ಅನುಮೋದನೆ ನೀಡಿದ್ದೆ ಎಂದು ಸ್ಮರಿಸಿದರು.
ಮಕ್ಕಳಿಗೆ ಉತ್ತಮ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ಓದಲು ಸಾಧ್ಯ. ಈ ಕಾರಣಕ್ಕೇ ನಾವು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಹಾಲು ಕೊಡುತ್ತಿದ್ದೇವೆ. ಇದರ ಜೊತೆಗೆ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳನ್ನೂ ಸರ್ಕಾರದಿಂದಲೇ ಕೊಡುತ್ತಿದ್ದೇವೆ ಎಂದರು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…