ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪ್ರವಾಸ ರದ್ದುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜೂನ್.20ರಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹೋಗಬೇಕಿತ್ತು.
ಆದೆರ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.





