ರಾಜ್ಯ

ಡಿಸಿ, ಸಿಇಒಗಳ ಪ್ರವಾಸ ಸಾರ್ವಜನಿಕರಿಗೆ ಲಭ್ಯವಿರಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳು ತಮ್ಮ ಪ್ರವಾಸ ಕಾರ್ಯಕ್ರಮವನ್ನು ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಶುಕ್ರವಾರ ವಿಧಾನಸೌಭದ ಕೊಠಡಿಯಲ್ಲಿ ಎಲ್ಲಾ ಜಿಲ್ಲೆಗಳ ಡಿಸಿ, ಎಸ್.ಪಿ ಹಾಗೂ ಸಿಇಒಗಳ ಸಭೆ ನಡೆಸಿ ಅವರು ಮಾತನಾಡಿದರು.

ಕೆಲವು ಜಿಲ್ಲಾಧಿಕಾರಿಗಳು, ಸಿಇಒಗಳು ಸರಿಯಾಗಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗದಿರುವ ಬಗ್ಗೆ ದೂರುಗಳು ಬಂದಿವೆ. ಸಾರ್ವಜನಿಕ ಭೇಟಿಯ ಅವಧಿಯನ್ನು ಮೊದಲೇ ಪ್ರಕಟಿಸಬೇಕು. ಶೋಷಿತರು, ಬಡವರು, ಜನಸಾಮಾನ್ಯರು ಸಾಮಾನ್ಯವಾಗಿ ಜಿಲ್ಲಾಧಿಕಾರಿ ಅವರ ಕಚೇರಿಗೆ ಬರುತ್ತಾರೆ. ಅಂತವರ ಸಂಕಷ್ಟಗಳನ್ನು ನೀವೇ ಆಲಿಸದಿದ್ದರೆ ಅದನ್ನು ಬಗೆಹರಿಸುವವರು ಯಾರು? ಯಾರ ಬಳಿ ಅವರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಬೇಕು? ಎಂದು ಪ್ರಶ್ನಿಸಿದರು.

ಅಧಿಕಾರಿಗಳು ತಪಾಸಣಾ ವರದಿ ಹಾಗೂ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಲೆಗಳು, ಹಾಸ್ಟೆಲ್ಗಳು , ವಸತಿ ಶಾಲೆಗಳು, ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ನಿರಂತರವಾಗಿ ಭೇಟಿ ನೀಡಬೇಕು. ಮುನ್ಸೂಚನೆ ಇಲ್ಲದೇ ಇಂತಹ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದು ಪದೇ ಪದೇ ಸೂಚನೆ ನೀಡಿದ್ದೇನೆ. ಆದರೂ ಕೆಲವರು ಇದನ್ನು ಪಾಲಿಸಿಲ್ಲ ಎನ್ನುವ ವರದಿ ನನಗೆ ಬಂದಿದೆ ಗರಂ ಆದರು.

ನಿಮ್ಮ ಅಧೀನದಲ್ಲಿರುವ ಇಲಾಖೆಗಳು, ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸುವುದು ನಿಮ್ಮ ಜವಾಬ್ದಾರಿ. ನೀವು ದಕ್ಷತೆಯಿಂದ ಕಾರ್ಯನಿರ್ವಹಿಸದಿದ್ದರೆ ಅಧೀನ ಅಧಿಕಾರಿಗಳು ಕಾರ್ಯನಿರ್ವಹಿಸುವುದನ್ನು ಹೇಗೆ ನಿರೀಕ್ಷಿಸಬಹುದು? ಎಂದು ಪ್ರಶ್ನಿಸಿದರು.

ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಆರೋಗ್ಯ, ಸಾರಿಗೆ ಸಂಚಾರದಂತಹ ಮೂಲಭೂತ ಸೌಕರ್ಯಗಳು ಲಭಿಸದಿದ್ದರೆ ಅದನ್ನು ಆಡಳಿತದ ವೈಫಲ್ಯವೆಂದೇ ಪರಿಗಣಿಸಬೇಕಾಗಿದೆ. ಹಾಡಿಗಳಲ್ಲಿ ಶಾಲೆ, ರಸ್ತೆ, ಆಸ್ಪತ್ರೆಯಂತಹ ಮೂಲಸೌಲಭ್ಯ ಒದಗಿಸಲು ಇಂದಿಗೂ ಸರಿಯಾಗಿ ಯಾಕೆ ಸಾಧ್ಯವಾಗಿಲ್ಲ; ಅವರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸರಿಯಾಗಿ ಹಕ್ಕು ಒದಗಿಸಲು ಯಾಕೆ ಸಾಧ್ಯವಾಗಿಲ್ಲ. ಜಿಲ್ಲಾಧಿಕಾರಿಗಳು, ಸಿಇಒಗಳು ಇಂತಹ ಹಾಡಿಗಳಿಗೆ ನಿರಂತರ ಭೇಟಿ ನೀಡಬೇಕು ಎಂದು ನಿರ್ದೇಶನ ನೀಡಿದರು.

ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ವಾಸವಿರಬೇಕು. ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು, ಜನರಿಗೆ ಲಭ್ಯವಿರಬೇಕು. ಇದನ್ನು ಜಿಲ್ಲಾಧಿಕಾರಿಗಳು ಖಾತ್ರಿಪಡಿಸಬೇಕು. ಕೇಂದ್ರ ಸ್ಥಾನದಲ್ಲಿರದ ಅಧಿಕಾರಿಗಳ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ನನಗೆ ವರದಿ ನೀಡಬೇಕು ಎಂದು ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಲ್ಲಿ ಕನಿಷ್ಟ ಎರಡು ಬಾರಿ ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಬೇಕು. ಅದರೊಂದಿಗೆ ಶಾಲೆ, ಹಾಸ್ಟೆಲ್, ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ವರದಿಯನ್ನು ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

1 hour ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

15 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

15 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

15 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

15 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

15 hours ago