ದಾವಣಗೆರೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು 60% ಕಮಿಷನ್ ನಡೆಯುತ್ತಿದೆ ಎಂಬ ಆರೋಪ ಆಧಾರ ರಹಿತ. ಈ ಆರೋಪ ಗಾಳಿ ಗುಂಡು ಹಾರಿಸಿದಂತಿದ್ದು, ಆಧಾರವಿಲ್ಲದೆ ಆರೋಪಿಸಬಾರದು ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಗರದ ಎಂಬಿಎ ಗ್ರೌಂಡ್ನ ಹೆಲಿಪ್ಯಾಡ್ ಆವರಣದಲ್ಲಿ ಇಂದು(ಜನವರಿ.5) ಸರ್ಕಾರದ ವಿರುದ್ಧದ ಎಚ್ಡಿಕೆ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ಒಂದು ವೇಳೆ ಆರೋಪ ಮಾಡಿದರೆ ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದೇ ಮೊದಲಲ್ಲ. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬರವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣಕ್ಕೆ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ. ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ನಾವು ತಯಾರಿದ್ದೇವೆ
ಇದೇ ವೇಳೆ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಬಗ್ಗೆ ಮಾತನಾಡಿದ ಅವರು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದರೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಹೀಗಾಗಿ ಪಂಚಾಯಿತಿ ಚುನಾವಣೆ ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಲು ನಾವು ತಯಾರಿದ್ದು, ಆದರೆ ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.
ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ಇನ್ನೂ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…