ಬೆಳಗಾವಿ: ಸಿಎಂ ಗಮನಕ್ಕೆ ತರದೇ ಯಾವುದೇ ಇಲಾಖೆಯಲ್ಲೂ ವರ್ಗಾವಣೆ ಮಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳಿಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದ್ದಾರೆ.
ಈ ಕುರಿತು ಅಧಿಕೃತವಾಗಿ ವಿವಿಧ ಇಲಾಖೆಗಳಿಗೆ ಸುತ್ತೋಲೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ಸಿಎಂ ಅನುಮತಿ ಇಲ್ಲದೆ, ಯಾವುದೇ ಇಲಾಖೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು. ಸಿಎಂ ಗಮನಕ್ಕೆ ತರದೇ ವರ್ಗಾವಣೆ ಆದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ಸರ್ಕಾರಿ ಅಧಿಕಾರಿಗಳು ತಮಗೆ ಇಷ್ಟ ಬಂದಂತೆ ವರ್ಗಾವಣೆ ಆಗುತ್ತಿದ್ದರು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ವರ್ಗಾವಣೆ ದಂಧೆಗೆ ಬ್ರೇಕ್ ಹಾಕಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರಿ ಅಧಿಕಾರಿಗಳನ್ನು ಯಾವುದೇ ಇಲಾಖೆಯಲ್ಲೂ ಬೇಕಾಬಿಟ್ಟಿ ವರ್ಗಾವಣೆ ಮಾಡುವಂತಿಲ್ಲ. ಇನ್ನು ಮುಂದೆ ಸಿಎಂ ಗಮನಕ್ಕೆ ತರದೇ ಯಾವುದೇ ಸರ್ಕಾರಿ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು. ಒಂದು ವೇಳೆ ವರ್ಗಾವಣೆ ಮಾಡಿದರೆ ಅದಕ್ಕೆ ಕಚೇರಿಯ ಮುಖ್ಯಸ್ಥರೇ ಹೊಣೆಗಾರರಾಗಿರುತ್ತಾರೆ. ಹೀಗಾಗಿ ಅವರ ವಿರುದ್ಧವೇ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…
ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…