ರಾಜ್ಯ

ಯುವ ಜನತೆ ದೇಶಕ್ಕೆ ಹೊರೆಯಾಗದೆ, ದೇಶಕ್ಕೆ ಸಂಪತ್ತಾಗಿ ಬೆಳೆಯಬೇಕು: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಯುವ ಜನತೆ ದೇಶಕ್ಕೆ ಹೊರೆಯಾಗದೆ, ದೇಶಕ್ಕೆ ಸಂಪತ್ತಾಗಿ ಬೆಳೆಯಬೇಕು ಎನ್ನುವ ಸಂಕಲ್ಪದೊಂದಿಗೆ ಸಜ್ಜಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಇಂದು(ಜನವರಿ.5) ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವ ಜನತೆ ಸಮಾಜಮುಖಿಯಾಗಿ ಬೆಳೆದಾಗ ದೇಶದ ಆಸ್ತಿ ಆಗುತ್ತಾರೆ. ಇದಕ್ಕಾಗಿ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಪಡೆದು ಸಮಾನ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಸಮಾಜದ ಪ್ರಗತಿಗೆ ಕಾರಣರಾಗಬೇಕು ಎಂದಿದ್ದಾರೆ.

ಕೆಲ ದುಷ್ಟ ಶಕ್ತಿಗಳು ನಮ್ಮ ರಾಜ್ಯದ ಮತ್ತು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ದೇಶದ ಮತ್ತು ರಾಜ್ಯದ ಪ್ರಗತಿಯೂ ನಾಶವಾಗುತ್ತದೆ. ಇಂತಹ ವಿಕೃತರಿಂದ ಯುವ ಜನತೆ ದೂರ ಉಳಿದು ತಮ್ಮ ಬದುಕು-ಭವಿಷ್ಯ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ದೇಶ ನಮಗೇನು ಕೊಟ್ಟಿತು ಎನ್ನುವುದಕ್ಕಿಂತ, ದೇಶಕ್ಕೆ ನಾವೇನು ಕೊಟ್ಟೆವು ಎನ್ನುವುದೇ ನಮಗೆ ಮುಖ್ಯವಾಗಬೇಕು. ಅನೇಕ ದುಷ್ಟ ಶಕ್ತಿಗಳು ದೇಶದ ನೆಮ್ಮದಿ ಕೆಡಿಸಲು, ಪ್ರಗತಿ ಹಾಳು ಮಾಡಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅಂತಹ ವಿಕೃತರಿಂದ ಯುವ ಜನತೆ ದೂರ ಉಳಿದು ಮನುಷತ್ಯ ಬೆಳೆಸಿಕೊಂಡು, ಸಮಾಜಮುಖಿಯಾಗಿ ಬೆಳೆಯಬೇಕು. ಹೀಗಾಗಿ ಇದರಿಂದಲೇ ಪ್ರಜಾಪ್ರಭುತ್ವ ಉಳಿಸಿ, ಬೆಳೆಸಲು ಸಾಧ್ಯ ಎಂದು ಹೇಳಿದ್ದಾರೆ.

ಸಂವಿಧಾನದ ಸಾರ ಪ್ರತಿಯೊಬ್ಬರಿಗೂ ಅರ್ಥ ಆಗಬೇಕು. ಪ್ರತಿ ಪ್ರಜೆಗೂ ಅರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರೆಯಬೇಕು. ಪ್ರತಿಯೊಬ್ಬರಿಗೂ ಅವರವರ ಧರ್ಮ ನಂಬಿಕೆಯ ಆಚರಣೆಗೆ ಅವಕಾಶ ಇರಬೇಕು ಎನ್ನುವುದೇ ಸಂವಿಧಾನದ ಸಾರವಾಗಿದೆ. ಈ ಸಂವಿಧಾನ ಇರುವುದರಿಂದಲೇ ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು. ಆದ್ದರಿಂದ ಈ ಸಂವಿಧಾನವನ್ನು ಕಾಪಾಡುವುದೇ ನಮ್ಮ ಜವಾಬ್ದಾರಿ ಎಂದಿದ್ದಾರೆ.

ಇನ್ನೂ ನಮ್ಮ ಸರ್ಕಾರ ಒಂದು ಲಕ್ಷದ 62 ಸಾವಿರ ಮಂದಿ ಯುವ ಜನತೆಯ ಖಾತೆಗೆ ಯುವನಿಧಿ ಹಣ ವರ್ಗಾವಣೆ ಮಾಡಿ, ಇವರಿಗೆ ಕೌಶಲ್ಯ ತರಬೇತಿಯನ್ನೂ ನೀಡುತ್ತಿದ್ದೇವೆ. ಅದಕ್ಕಾಗಿ 213 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದ್ದೇವೆ. ವಿದ್ಯಾವಂತ ನಿರುದ್ಯೋಗಿ ಪದವೀಧರರ ನೆರವಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕು ಎನ್ನುವ ಸಂಕಲ್ಪದಿಂದ ನಾವು ಈ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

3 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

3 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

4 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

4 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

5 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

5 hours ago