ರಾಜ್ಯ

ಯುವ ಜನತೆ ದೇಶಕ್ಕೆ ಹೊರೆಯಾಗದೆ, ದೇಶಕ್ಕೆ ಸಂಪತ್ತಾಗಿ ಬೆಳೆಯಬೇಕು: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಯುವ ಜನತೆ ದೇಶಕ್ಕೆ ಹೊರೆಯಾಗದೆ, ದೇಶಕ್ಕೆ ಸಂಪತ್ತಾಗಿ ಬೆಳೆಯಬೇಕು ಎನ್ನುವ ಸಂಕಲ್ಪದೊಂದಿಗೆ ಸಜ್ಜಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಇಂದು(ಜನವರಿ.5) ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವ ಜನತೆ ಸಮಾಜಮುಖಿಯಾಗಿ ಬೆಳೆದಾಗ ದೇಶದ ಆಸ್ತಿ ಆಗುತ್ತಾರೆ. ಇದಕ್ಕಾಗಿ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಪಡೆದು ಸಮಾನ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಸಮಾಜದ ಪ್ರಗತಿಗೆ ಕಾರಣರಾಗಬೇಕು ಎಂದಿದ್ದಾರೆ.

ಕೆಲ ದುಷ್ಟ ಶಕ್ತಿಗಳು ನಮ್ಮ ರಾಜ್ಯದ ಮತ್ತು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ದೇಶದ ಮತ್ತು ರಾಜ್ಯದ ಪ್ರಗತಿಯೂ ನಾಶವಾಗುತ್ತದೆ. ಇಂತಹ ವಿಕೃತರಿಂದ ಯುವ ಜನತೆ ದೂರ ಉಳಿದು ತಮ್ಮ ಬದುಕು-ಭವಿಷ್ಯ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ದೇಶ ನಮಗೇನು ಕೊಟ್ಟಿತು ಎನ್ನುವುದಕ್ಕಿಂತ, ದೇಶಕ್ಕೆ ನಾವೇನು ಕೊಟ್ಟೆವು ಎನ್ನುವುದೇ ನಮಗೆ ಮುಖ್ಯವಾಗಬೇಕು. ಅನೇಕ ದುಷ್ಟ ಶಕ್ತಿಗಳು ದೇಶದ ನೆಮ್ಮದಿ ಕೆಡಿಸಲು, ಪ್ರಗತಿ ಹಾಳು ಮಾಡಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅಂತಹ ವಿಕೃತರಿಂದ ಯುವ ಜನತೆ ದೂರ ಉಳಿದು ಮನುಷತ್ಯ ಬೆಳೆಸಿಕೊಂಡು, ಸಮಾಜಮುಖಿಯಾಗಿ ಬೆಳೆಯಬೇಕು. ಹೀಗಾಗಿ ಇದರಿಂದಲೇ ಪ್ರಜಾಪ್ರಭುತ್ವ ಉಳಿಸಿ, ಬೆಳೆಸಲು ಸಾಧ್ಯ ಎಂದು ಹೇಳಿದ್ದಾರೆ.

ಸಂವಿಧಾನದ ಸಾರ ಪ್ರತಿಯೊಬ್ಬರಿಗೂ ಅರ್ಥ ಆಗಬೇಕು. ಪ್ರತಿ ಪ್ರಜೆಗೂ ಅರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರೆಯಬೇಕು. ಪ್ರತಿಯೊಬ್ಬರಿಗೂ ಅವರವರ ಧರ್ಮ ನಂಬಿಕೆಯ ಆಚರಣೆಗೆ ಅವಕಾಶ ಇರಬೇಕು ಎನ್ನುವುದೇ ಸಂವಿಧಾನದ ಸಾರವಾಗಿದೆ. ಈ ಸಂವಿಧಾನ ಇರುವುದರಿಂದಲೇ ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು. ಆದ್ದರಿಂದ ಈ ಸಂವಿಧಾನವನ್ನು ಕಾಪಾಡುವುದೇ ನಮ್ಮ ಜವಾಬ್ದಾರಿ ಎಂದಿದ್ದಾರೆ.

ಇನ್ನೂ ನಮ್ಮ ಸರ್ಕಾರ ಒಂದು ಲಕ್ಷದ 62 ಸಾವಿರ ಮಂದಿ ಯುವ ಜನತೆಯ ಖಾತೆಗೆ ಯುವನಿಧಿ ಹಣ ವರ್ಗಾವಣೆ ಮಾಡಿ, ಇವರಿಗೆ ಕೌಶಲ್ಯ ತರಬೇತಿಯನ್ನೂ ನೀಡುತ್ತಿದ್ದೇವೆ. ಅದಕ್ಕಾಗಿ 213 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದ್ದೇವೆ. ವಿದ್ಯಾವಂತ ನಿರುದ್ಯೋಗಿ ಪದವೀಧರರ ನೆರವಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕು ಎನ್ನುವ ಸಂಕಲ್ಪದಿಂದ ನಾವು ಈ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

3 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

3 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

6 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

6 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

6 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

6 hours ago