Mysore
19
overcast clouds

Social Media

ಸೋಮವಾರ, 09 ಫೆಬ್ರವರಿ 2026
Light
Dark

ಪಾಕ್‌ ವಿರುದ್ಧ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಯೂಟರ್ನ್‌

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧ ಮಾಡುವುದೇ ಬೇಡವೆಂದು ನಾನು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಯೂಟರ್ನ್‌ ಹೊಡೆದಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಯುದ್ಧ ಅನಿವಾರ್ಯವಾದರೆ ಮಾತ್ರ ಯುದ್ಧ ಮಾಡಬೇಕು. ಯುದ್ಧದಿಂದಲೇ ಪರಿಹಾರ ಸಿಗಲ್ಲ. ಭದ್ರತೆ ಕೊಡಬೇಕು ಅಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ಈ ಹಿಂದೆ 40 ಸೈನಿಕರು ಮೃತಪಟ್ಟಿದ್ದರು. ಈಗ 28 ಜನ ಸಾವನ್ನಪ್ಪಿದ್ದಾರೆ. ಯುದ್ಧ ಅನಿವಾರ್ಯವಾದರೆ ಮಾತ್ರ ಮಾಡಬೇಕು. ತಕ್ಷಣಕ್ಕೆ ಯುದ್ಧ ಬೇಡ ಎಂದು ಹೇಳಿದ್ದೇನೆ. ಬಿಜೆಪಿಯವರು ಉತ್ತರ ಕೊಡುವುದೇ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, 28 ಮಂದಿ ಪ್ರವಾಸಿಗರು ಬಲಿಯಾಗಿದ್ದರು. ಈ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಯುದ್ಧದ ಬಗ್ಗೆ ಚರ್ಚೆಯಾಗುತ್ತಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು, ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಈ ಹೇಳಿಕೆಯಿಂದ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ಪಾಕ್‌ ಮೀಡಿಯಾಗಳ ಕೂಡ ಇದನ್ನು ಪ್ರಸಾರ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಈಗ ಸಿಎಂ ಸಿದ್ದರಾಮಯ್ಯ ಈ ಕುರಿತು ಸ್ಪಷ್ಟನೆ ನೀಡಿದ್ದು, ನಾನು ಯುದ್ಧ ಬೇಡವೇ ಬೇಡ ಎಂದು ಹೇಳಿಲ್ಲ ಎಂದಿದ್ದಾರೆ.

Tags:
error: Content is protected !!