ರಾಜ್ಯ

ಪಾಕ್‌ ವಿರುದ್ಧ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಯೂಟರ್ನ್‌

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧ ಮಾಡುವುದೇ ಬೇಡವೆಂದು ನಾನು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಯೂಟರ್ನ್‌ ಹೊಡೆದಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಯುದ್ಧ ಅನಿವಾರ್ಯವಾದರೆ ಮಾತ್ರ ಯುದ್ಧ ಮಾಡಬೇಕು. ಯುದ್ಧದಿಂದಲೇ ಪರಿಹಾರ ಸಿಗಲ್ಲ. ಭದ್ರತೆ ಕೊಡಬೇಕು ಅಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ಈ ಹಿಂದೆ 40 ಸೈನಿಕರು ಮೃತಪಟ್ಟಿದ್ದರು. ಈಗ 28 ಜನ ಸಾವನ್ನಪ್ಪಿದ್ದಾರೆ. ಯುದ್ಧ ಅನಿವಾರ್ಯವಾದರೆ ಮಾತ್ರ ಮಾಡಬೇಕು. ತಕ್ಷಣಕ್ಕೆ ಯುದ್ಧ ಬೇಡ ಎಂದು ಹೇಳಿದ್ದೇನೆ. ಬಿಜೆಪಿಯವರು ಉತ್ತರ ಕೊಡುವುದೇ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, 28 ಮಂದಿ ಪ್ರವಾಸಿಗರು ಬಲಿಯಾಗಿದ್ದರು. ಈ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಯುದ್ಧದ ಬಗ್ಗೆ ಚರ್ಚೆಯಾಗುತ್ತಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು, ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಈ ಹೇಳಿಕೆಯಿಂದ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ಪಾಕ್‌ ಮೀಡಿಯಾಗಳ ಕೂಡ ಇದನ್ನು ಪ್ರಸಾರ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಈಗ ಸಿಎಂ ಸಿದ್ದರಾಮಯ್ಯ ಈ ಕುರಿತು ಸ್ಪಷ್ಟನೆ ನೀಡಿದ್ದು, ನಾನು ಯುದ್ಧ ಬೇಡವೇ ಬೇಡ ಎಂದು ಹೇಳಿಲ್ಲ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

18 mins ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

50 mins ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

1 hour ago

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

1 hour ago

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

2 hours ago

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

3 hours ago