ರಾಜ್ಯ

ಪಾಕ್‌ ವಿರುದ್ಧ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಯೂಟರ್ನ್‌

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧ ಮಾಡುವುದೇ ಬೇಡವೆಂದು ನಾನು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಯೂಟರ್ನ್‌ ಹೊಡೆದಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದೊಂದಿಗೆ ಯುದ್ಧ ಅನಿವಾರ್ಯವಾದರೆ ಮಾತ್ರ ಯುದ್ಧ ಮಾಡಬೇಕು. ಯುದ್ಧದಿಂದಲೇ ಪರಿಹಾರ ಸಿಗಲ್ಲ. ಭದ್ರತೆ ಕೊಡಬೇಕು ಅಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ಈ ಹಿಂದೆ 40 ಸೈನಿಕರು ಮೃತಪಟ್ಟಿದ್ದರು. ಈಗ 28 ಜನ ಸಾವನ್ನಪ್ಪಿದ್ದಾರೆ. ಯುದ್ಧ ಅನಿವಾರ್ಯವಾದರೆ ಮಾತ್ರ ಮಾಡಬೇಕು. ತಕ್ಷಣಕ್ಕೆ ಯುದ್ಧ ಬೇಡ ಎಂದು ಹೇಳಿದ್ದೇನೆ. ಬಿಜೆಪಿಯವರು ಉತ್ತರ ಕೊಡುವುದೇ ಸರಿಯಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, 28 ಮಂದಿ ಪ್ರವಾಸಿಗರು ಬಲಿಯಾಗಿದ್ದರು. ಈ ಬೆನ್ನಲ್ಲೇ ಭಾರತ-ಪಾಕಿಸ್ತಾನ ನಡುವೆ ಯುದ್ಧದ ಬಗ್ಗೆ ಚರ್ಚೆಯಾಗುತ್ತಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು, ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಈ ಹೇಳಿಕೆಯಿಂದ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ಪಾಕ್‌ ಮೀಡಿಯಾಗಳ ಕೂಡ ಇದನ್ನು ಪ್ರಸಾರ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಈಗ ಸಿಎಂ ಸಿದ್ದರಾಮಯ್ಯ ಈ ಕುರಿತು ಸ್ಪಷ್ಟನೆ ನೀಡಿದ್ದು, ನಾನು ಯುದ್ಧ ಬೇಡವೇ ಬೇಡ ಎಂದು ಹೇಳಿಲ್ಲ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…

59 mins ago

ನನಗೂ ಎಂಎಲ್‌ಸಿ ಸ್ಥಾನ ಕೊಡಿ : ರಕ್ತದಲ್ಲಿ ಸಹಿ ಹಾಕಿ ವರಿಷ್ಠರಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ

ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…

1 hour ago

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

4 hours ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

4 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…

4 hours ago

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

4 hours ago