ರಾಜ್ಯ

ಕಾಮ್ರೇಡ್ ಸೂರ್ಯನಾರಾಯಣ್ ಸದನದ ಒಳಗೆ ಮತ್ತು ಹೊರಗೂ ಹೋರಾಟಗಾರರಾಗಿದ್ದರು: ಸಿಎಂ

ಬೆಂಗಳೂರು: ಕಾಮ್ರೇಡ್ ಸೂರ್ಯನಾರಾಯಣ್ ಸದನದ ಒಳಗೆ ಮತ್ತು ಹೊರಗೂ ಹೋರಾಟಗಾರರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ಕಾಮ್ರೇಡ್ ಸೂರ್ಯನಾರಾಣರಾವ್ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ಟೌನ್ ಹಾಲ್ ನಲ್ಲಿಂದು (ಆ 24) “ಕರ್ನಾಟಕದ ಅಭಿವೃದ್ಧಿಯಲ್ಲಿ ಕಾರ್ಮಿಕ‌ ಚಳವಳಿಯ ಪಾತ್ರ” ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದರು.‌

ಶ್ರಮಿಕರ ಧ್ವನಿಯಾಗಿ ಸೂರ್ಯನಾರಾಯಣ್ ರಾವ್ ಅವರು ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸುತ್ತಿದ್ದರು.

ಯಾವುದೇ ವಿಚಾರವಾದರೂ ಸರಿ ಸಂಪೂರ್ಣ ಸಿದ್ಧತೆ ಮಾಡಿಕೊಂಡು ಬರುತ್ತಿದ್ದರು. ಹೀಗಾಗಿ ಇವರ ಮಾತು ಮತ್ತು ಭಾಷಣ ಕೇಳಲು ನಾವು ಕಾತರರಾಗಿರುತ್ತಿದ್ದೆವು ಎಂದರು.

ಸೂರ್ಯನಾರಾಯಣ್ ರಾವ್ ಅವರಿಗೆ ಬದ್ಧತೆ ಮತ್ತು ಕಾಳಜಿ ಇತ್ತು. ಕಮ್ಯುನಿಸ್ಟ್ ಕಾರ್ಯಕರ್ತರು ಸಾಮಾನ್ಯವಾಗಿ ಅಧಿಕಾರಕ್ಕಾಗಿ ಹೆಚ್ಚು‌ಆಸೆ ಪಡುವವರಲ್ಲ. ಹೋರಾಟಕ್ಕೆ ಹೆಚ್ಚು ಆಧ್ಯತೆ ಕೊಡುತ್ತಿದ್ದರು. ಜನರ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೂ ಸದನದ ಒಳಗೆ ಪಟ್ಟು ಬಿಡದೆ ಹೋರಾಟ ನಡೆಸುತ್ತಿದ್ದರು ಎಂದು ಮೆಚ್ಚುಗೆ ಸೂಚಿಸಿದರು.

ನಾನು ಕಾರ್ಮಿಕ ಸಚಿವನಾಗಿದ್ದಾಗ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವವರೆಗೂ ಕುಳಿತಲ್ಲಿಂದ ಮೇಲೇಳುತ್ತಿರಲಿಲ್ಲ ಎಂದರು.

ಈಗ ಸುಳ್ಳುಗಳನ್ನೇ ಸತ್ಯ ಮಾಡುವ ಹಿಟ್ಲರ್ ಮನಸ್ಥಿತಿಯ ರಾಜಕಾರಣಿಗಳು ಹೆಚ್ಚಾಗಿದ್ದಾರೆ. ದಣಿವರಿಯದ ಹೋರಾಟಗಾರರಾಗಿದ್ದ ಕಾಮ್ರೇಡ್ ಸೂರಿ ಸದಾ ಸತ್ಯದ ಮೂಲಕ ಸರ್ಕಾರಕ್ಕೆ ಎಚ್ಚರಿಸುತ್ತಿದ್ದರು. ಸದನದ ಒಳಗಾಗಲಿ, ಹೊರಗಾಗಲಿ ಶಾಂತಿ ಕದಡುವ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿರಲಿಲ್ಲ ಎಂದರು.

ನಮ್ಮ ಸರ್ಕಾರ ದುಡಿಯುವ ವರ್ಗದ ಏಳಿಗೆಗಾಗಿ ಕಾರ್ಯಕ್ರಮಗಳನ್ನು ರೂಪಿಸಿದೆ. ನಮ್ಮ ಸರ್ಕಾರ ಸದಾ ನಿಮ್ಮ ಪರವಾಗಿ, ಕಾರ್ಮಿಕರ ಪರವಾಗಿ ಇರುತ್ತದೆ. ನಾವು ಕಾರ್ಮಿಕರ ಪರವಾಗಿ ಕಾರ್ಯಕ್ರಮ ರೂಪಿಸಿದ್ದನ್ನು, ಗ್ಯಾರಂಟಿಗಳನ್ನು ನೀಡಿದ್ದನ್ನು ಬಿಜೆಪಿ-ಆರ್ ಎಸ್ ಎಸ್ ನಂತಹ ಬಲಪಂಥೀಯ ಸಂಘಟನೆಗಳು ವಿರೋಧಿಸುತ್ತಿವೆ ಎಂದರು.

ದುಡಿಯುವ ವರ್ಗದ ಹೋರಾಟದ ಮ್ಯೂಸಿಯಂ ರಚನೆಗೆ ಕ್ರಮ: ದುಡಿಯುವ ವರ್ಗದ ಹೋರಾಟದ ಮ್ಯೂಸಿಯಂ ರಚನೆಗೆ ಕ್ರಮ ಕೈಗೊಳ್ಳುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ‌ ಭರವಸೆ ನೀಡಿದರು.

ಕಾಮ್ರೇಡ್ ಬಿಜೆಕೆ ನಾಯರ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ CITU ಪ್ರಧಾನ ಕಾರ್ಯದರ್ಶಿ ತಪನ್ ಸೇನ್, ಕಾಮ್ರೇಡ್ ಸೂರ್ಯನಾರಾಯಣ್ ಅವರ ಪುತ್ರಿ ಶ್ರೀಮತಿ ರೇಖಾ ಸೇರಿ ಹಲವು ಹೋರಾಟಗಾರರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

11 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

11 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

11 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

11 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

12 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

12 hours ago