ಮೈಸೂರು: ಸಿದ್ದರಾಮಯ್ಯ ಗರ್ವ ಭಂಗವಾಗಬೇಕು ಎಂಬ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನನಗೆ ಗರ್ವ ಇದ್ದರೆ ತಾನೇ ಭಂಗ ಆಗುವುದು ಎಂದು ಕಿಡಿಕಾರಿದ್ದಾರೆ.
ಮೈಸೂರು, ಚಾಮರಾಜನಗರದ ಪ್ರವಾಸದಲ್ಲಿರುವ ಸಿಎಂ ಇಂದು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ದೇವೇಗೌಡರು ಹೇಳಿದನ್ನೇ ನಾನು ಹೇಳಿದ್ದೇನೆ ಎಂದಿದ್ದಾರೆ.
ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದವರು ಯಾರು? ಮುಂದಿನ ಜನ್ಮ ಇದ್ದರೆ ಮುಸ್ಲಿಂ ಆಗುತ್ತೇನೆ ಎಂದಿದ್ದವರು ಯಾರು? ಎಂದು ಕೇಳಿದರು. ನೀಜ ಹೇಳಿದರೆ ತಪ್ಪಾ? ಮೋದಿ ಎಂದಿಗೆ ಚೆನ್ನಾಗಿರುವ ದೇವೇಗೌಡರು ಮೇಕೆದಾಟು ಯೋಜನೆಗೆ ಈಗಲೇ ಅನುದಾನ ಕೊಡಿಸಲಿ. ಇದನ್ನು ಕೇಳುವುದು ಗರ್ವನಾ? ಸತ್ಯ ಹೇಳಿದರೆ ಅವರ ದೃಷ್ಟಿಯಲ್ಲಿ ಗರ್ವ. ಸುಳ್ಳು ಹೇಳಿದವರು ಅವರು, ನಾನು ಸತ್ಯ ಹೇಳುತ್ತಿದ್ದೇನೆ, ಅದನ್ನು ಗರ್ವ ಎನ್ನುತ್ತಾರೆ, ಏನು ಮಾಡುವುದು ಎಂದು ಕೇಳಿದರು.
ದೇವೇಗೌಡ ನಾನು ಬಹಳ ವರ್ಷ ಜತೆಯಲ್ಲಿದ್ದರಿಂದಾಗಿ ಎಲ್ಲ ಕಡೆ ನನ್ನ ಬಗ್ಗೇಯೇ ಮಾತನಾಡುತ್ತಾರೆ ಎಂದು ಹಾಸ್ಯ ಚಟಾಕಿ ಹಾರಿಸಿದರು.
ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಹಾಗೂ ನಮ್ಮ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ, ಸಾಧನೆ ಮತ್ತು ಗ್ಯಾರಂಟಿ ಕ್ರಾರ್ಯಕ್ರಮಗಳು ನಮ್ಮ ಕೈ ಹಿಡಿಯುತ್ತವೆ. ಮೈಸೂ-ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳೆರಡರಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ. ಮೈಸೂರು ಮಾತ್ರಾ ನನಗೆ ಮುಖ್ಯವಲ್ಲ. ಎಲ್ಲ ಕ್ಷೇತ್ರಗಳೂ ಬಹಳ ಮುಖ್ಯ ಎಂದು ಹೇಳಿದರು.
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…
ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…
ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…
ಮಂಜು ಕೋಟೆ ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ ಎಚ್.ಡಿ.ಕೋಟೆ: ತಾಲ್ಲೂಕಿನ…