ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್-ಬಿಜೆಪಿ ನಡುವಿನ ಮೈತ್ರಿಯನ್ನು ಗೇಲಿ ಮಾಡಿದ್ದು, ಮೊನ್ನೆಯವರಿಗೆ ಬಿಜೆಪಿಯನ್ನು ಬೈದಾಡಿಕೊಂಡು ತಿರುಗುತ್ತಿದ್ದ ಕುಮಾರಸ್ವಾಮಿ ಮತ್ತು ಜೆಡಿಎಸ್ ನಾಯಕರು ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಕಾಲೆಳೆದಿದ್ದಾರೆ. ನಿಜಕ್ಕೂ ಕುಮಾರಸ್ವಾಮಿಗೆ ಸ್ವಲ್ಪವಾದರೂ ಆತ್ಮಗೌರವ ಇದ್ದಿದ್ದರೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಗೇಲಿ ಮಾಡಿದ್ದಾರೆ.
2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 80 ಸೀಟಿ ಸಿಕ್ಕಿದ್ದರೂ ಕುಮಾರಸ್ವಾಮಿ ಜೊತೆ ಬಿಜೆಪಿ ಜತೆ ಸೇರಬಾರದು ಅನ್ನೋ ಒಂದೇ ಕಾರಣಕ್ಕೆ ಸಮ್ಮಿಶ್ರ ಸರ್ಕಾರ ಮಾಡಿ ಅವರನ್ನು ಮುಖ್ಯಮಂತ್ರಿ ಮಾಡಿದೆವು. ಅದಕ್ಕೆ ದೇವೆಗೌಡರ ಒಪ್ಪಿಗೆ ಸಹ ಇತ್ತು. 14 ತಿಂಗಳು ಕಾಲ ಚೆನ್ನಾಗಿ ನಡೆದಿದ್ದ ಸರ್ಕಾರವನ್ನು ಬೀಳಿಸಿದ್ದು ಯಡಿಯೂರಪ್ಪ ಎಂದು ಸಿದ್ದರಾಮಯ್ಯ ಗಟ್ಟಿಧ್ವನಿಯಲ್ಲಿ ಹೇಳಿದರು.
ಕುಮಾರಸ್ವಾಮಿ ಮತ್ತು ದೇವೇಗೌಡ ಅವರಿಗೆ ಕೊಂಚವಾದರೂ ಆತ್ಮಗೌರವ ಇದ್ದಿದ್ದರೆ ಬಿಜೆಪಿ ಮೈತ್ರಿ ಬೆಳೆಸುತ್ತಿರಲಿಲ್ಲ ಎಂದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…