ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ತಮ್ಮ ತವರು ಕ್ಷೇತ್ರ ವರುಣಾದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡುತ್ತಿರುವಾಗ ವರುಣಾದಲ್ಲಿ 60 ಸಾವಿರ ಲೀಡ್ ಬೇಕು, ಅಷ್ಟು ಲೀಡ್ ಬಂದಿದ್ದೇ ಆದರೆ ಯಾರು ನನ್ನನ್ನು ಮುಟ್ಟಲು ಸಾಧ್ಯವಿಲ್ಲ, ನಾನು ಇರಬೇಕೋ, ಬೇಡ್ವೋ ಎಂದು ಹೇಳಿದ್ದು ವ್ಯಾಪಕವಾಗಿ ಚರ್ಚೆಯಾಗುತ್ತಿದೆ.
ಈ ಬಗ್ಗೆ ಇಂದು ಮೈಸೂರಿನ ತಮ್ಮ ಟಿ.ಕೆ ಲೇಔಟ್ ಮನೆ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮತನಾಡುವಾಗ ಸ್ಪಷ್ಟನೆ ನೀಡಿದ ಅವರು, ಅದೇನು ಭಾವನಾತ್ಮಕ ಅಲ್ಲ. ಹೆಚ್ಚು ಲೀಡ್ ಬೇಕು ಎಂದು ಸ್ವಕ್ಷೇತ್ರದವರನ್ನು ಕೇಳಿದ್ದೇನೆ ಅಷ್ಟೇ. ಕಳೆದ ಚುನಾವಣೆಯಲ್ಲಿ ನಮಗೆ 48 ಸಾವಿರ ಲೀಡ್ ಬಂದಿತ್ತು. ಈ ಬಾರಿ ಅದನ್ನು 60 ಸಾವಿರಕ್ಕೆ ಮುಟ್ಟಿಸಿ ಎಂದು ಹೇಳಿದ್ದೇನೆ. ಅದಕ್ಕೆ ಬೇರೆ ರೀತಿಯ ವಿಶ್ಲೇಷಣೆ ಬೇಡ ಎಂದಿದ್ದಾರೆ.
ಅದು ನನ್ನ ಸಹಜವಾದ ಮಾತುಗಳು ಅಷ್ಟೇ. ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳು ಮಾತ್ರವಲ್ಲ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ವಿಚಾರದಲ್ಲೂ ನಾನು ಗಂಭೀರವಾಗಿದ್ದೇನೆ. ಮತ್ತೊಂದು ಬಾರಿ ಈ ಭಾಗಕ್ಕೆ ಪ್ರವಾಸ ಬರುತ್ತೇನೆ. ಬಿಜೆಪಿಯವರು ಬಂದರೆ ಬಡವರ ಕಾರ್ಯಕ್ರಮಗಳು ನಿಂತು ಹೋಗುತ್ತವೆ. ಹೀಗಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಹೆಚ್ಚು ಲೀಡ್ ಕೊಡಿ ಎಂದು ಕೇಳಿಕೊಂಡಿದ್ದೇನೆ ಎಂದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…