ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ತಮ್ಮ ತವರು ಕ್ಷೇತ್ರ ವರುಣಾದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡುತ್ತಿರುವಾಗ ವರುಣಾದಲ್ಲಿ 60 ಸಾವಿರ ಲೀಡ್ ಬೇಕು, ಅಷ್ಟು ಲೀಡ್ ಬಂದಿದ್ದೇ ಆದರೆ ಯಾರು ನನ್ನನ್ನು ಮುಟ್ಟಲು ಸಾಧ್ಯವಿಲ್ಲ, ನಾನು ಇರಬೇಕೋ, ಬೇಡ್ವೋ ಎಂದು ಹೇಳಿದ್ದು ವ್ಯಾಪಕವಾಗಿ ಚರ್ಚೆಯಾಗುತ್ತಿದೆ.
ಈ ಬಗ್ಗೆ ಇಂದು ಮೈಸೂರಿನ ತಮ್ಮ ಟಿ.ಕೆ ಲೇಔಟ್ ಮನೆ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮತನಾಡುವಾಗ ಸ್ಪಷ್ಟನೆ ನೀಡಿದ ಅವರು, ಅದೇನು ಭಾವನಾತ್ಮಕ ಅಲ್ಲ. ಹೆಚ್ಚು ಲೀಡ್ ಬೇಕು ಎಂದು ಸ್ವಕ್ಷೇತ್ರದವರನ್ನು ಕೇಳಿದ್ದೇನೆ ಅಷ್ಟೇ. ಕಳೆದ ಚುನಾವಣೆಯಲ್ಲಿ ನಮಗೆ 48 ಸಾವಿರ ಲೀಡ್ ಬಂದಿತ್ತು. ಈ ಬಾರಿ ಅದನ್ನು 60 ಸಾವಿರಕ್ಕೆ ಮುಟ್ಟಿಸಿ ಎಂದು ಹೇಳಿದ್ದೇನೆ. ಅದಕ್ಕೆ ಬೇರೆ ರೀತಿಯ ವಿಶ್ಲೇಷಣೆ ಬೇಡ ಎಂದಿದ್ದಾರೆ.
ಅದು ನನ್ನ ಸಹಜವಾದ ಮಾತುಗಳು ಅಷ್ಟೇ. ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳು ಮಾತ್ರವಲ್ಲ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ವಿಚಾರದಲ್ಲೂ ನಾನು ಗಂಭೀರವಾಗಿದ್ದೇನೆ. ಮತ್ತೊಂದು ಬಾರಿ ಈ ಭಾಗಕ್ಕೆ ಪ್ರವಾಸ ಬರುತ್ತೇನೆ. ಬಿಜೆಪಿಯವರು ಬಂದರೆ ಬಡವರ ಕಾರ್ಯಕ್ರಮಗಳು ನಿಂತು ಹೋಗುತ್ತವೆ. ಹೀಗಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಹೆಚ್ಚು ಲೀಡ್ ಕೊಡಿ ಎಂದು ಕೇಳಿಕೊಂಡಿದ್ದೇನೆ ಎಂದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…