ರಾಜ್ಯ

ವಿದ್ಯಾರ್ಥಿಗಳಿಗೆ ಸಂವಿಧಾನ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನದಲ್ಲಿ ಕಂದಾಚಾರಗಳಿಗೆ ಅವಕಾಶವಿಲ್ಲ. ಅದು ಕೇವಲ ಒಂದು ಜಾತಿ ಅಥವಾ ಒಂದು ಧರ್ಮಕ್ಕೆ ಮಾತ್ರ ಸೀಮಿತವಲ್ಲ, ಈ ದೇಶಕ್ಕೆ ಸೀಮಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು(ಡಿ.3) ಸಂವಿಧಾನ ಓದು ಅಭಿಯಾನ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಭಾರತ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮದವರಿಗೆ ಸಮಾನವಾಗಿ ನಡೆಸಿಕೊಳ್ಳುವುದು ನಮ್ಮ ದೇಶದ ಗುಣ. ಇದೇ ಸಂವಿಧಾನದ ಮೌಲ್ಯ. ಸಂವಿಧಾನದ ಬಗ್ಗೆ ಗೌರವ ಇಲ್ಲದವರ ಕೈಗೆ ಹೋದರೆ, ಎಷ್ಟೇ ಒಳ್ಳೆ ಸಂವಿಧಾನ ಆದರೂ ಪರಿಣಾಮ ಕೆಟ್ಟದಾಗಿರುತ್ತದೆ ಎಂದಿದ್ದಾರೆ.

ಸಂವಿಧಾನದ ಶ್ರೇಷ್ಠತೆ ಮತ್ತು ವಿಫಲತೆ ಅದು ಯಾರ ಕೈಯಲ್ಲಿದೆ ಎನ್ನುವವರ ಆಧಾರದ ಮೇಲೆ ನಿರ್ಧಾರವಾಗುತ್ತದೆ ಎನ್ನುವ ಅಂಬೇಡ್ಕರ್ ಅವರ ಮಾತು ಹಾಗೂ ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಕುವೆಂಪು ಅವರ ಮಾತುಗಳನ್ನು ಉಲ್ಲೇಖಿಸಿ ಪಾಠ ಮುಂದುವರೆಸಿದ್ದಾರೆ.

ನಮ್ಮ ದೇಶದ ಸಂವಿಧಾನದ ಪೀಠಿಕೆಯಲ್ಲಿ ಇಡೀ ಸಂವಿಧಾನದ ಸಾರಾಂಶ ಇದೆ. ಜಾತ್ಯತೀತತೆ, ಸಾಮಾಜಿಕ ನ್ಯಾಯ ಎರಡೂ ಮೂಲ ಸಂವಿಧಾನದಲ್ಲಿ ಇರಲಿಲ್ಲ. ಬಳಿಕ 42ನೇ ತಿದ್ದುಪಡಿಯ ಮೂಲಕ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಕಾಲದಲ್ಲಿ ಸೇರ್ಪಡೆಯಾಯಿತು. ಅದನ್ನು ತೆಗೆಯಬೇಕು ಎಂದು ಕೆಲವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಿತು. ಭಾರತದಲ್ಲಿ ಅಸಮಾನತೆ ಸೃಷ್ಟಿಯಾಗಿದ್ದು ಜಾತಿ ವ್ಯವಸ್ಥೆಯಿಂದ. ಈ ಜಾತಿ ಆಧಾರದ ಮೇಲೆ ಒಬ್ಬರ ಯೋಗ್ಯತೆ ಅಳೆಯುವುದು ಅನಾಗರಿಕತನ ಎಂದು ಹೇಳಿದ್ದಾರೆ.

ನಮ್ಮ ಸಂವಿಧಾನದ ಹಕ್ಕುಗಳು ಏನೇನು ಅಂತ ಗೊತ್ತಿದ್ದರೆ ಮಾತ್ರ ಅವುಗಳನ್ನು ಪಡೆದುಕೊಳ್ಳಬಹುದು. ಏಳು ಸ್ವಾತಂತ್ರ್ಯಗಳನ್ನು ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ನೀಡಿದೆ. ಇದನ್ನೆಲ್ಲಾ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಅಲ್ಲದೇ ಸಂವಿಧಾನದ ಧ್ಯೇಯೋದ್ದೇಶ ಹಾಗೂ ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ತಿಳಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

10 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

10 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

11 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

12 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

12 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

12 hours ago