ಬೆಂಗಳೂರು: ಸಂವಿಧಾನದಲ್ಲಿ ಕಂದಾಚಾರಗಳಿಗೆ ಅವಕಾಶವಿಲ್ಲ. ಅದು ಕೇವಲ ಒಂದು ಜಾತಿ ಅಥವಾ ಒಂದು ಧರ್ಮಕ್ಕೆ ಮಾತ್ರ ಸೀಮಿತವಲ್ಲ, ಈ ದೇಶಕ್ಕೆ ಸೀಮಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು(ಡಿ.3) ಸಂವಿಧಾನ ಓದು ಅಭಿಯಾನ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಭಾರತ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮದವರಿಗೆ ಸಮಾನವಾಗಿ ನಡೆಸಿಕೊಳ್ಳುವುದು ನಮ್ಮ ದೇಶದ ಗುಣ. ಇದೇ ಸಂವಿಧಾನದ ಮೌಲ್ಯ. ಸಂವಿಧಾನದ ಬಗ್ಗೆ ಗೌರವ ಇಲ್ಲದವರ ಕೈಗೆ ಹೋದರೆ, ಎಷ್ಟೇ ಒಳ್ಳೆ ಸಂವಿಧಾನ ಆದರೂ ಪರಿಣಾಮ ಕೆಟ್ಟದಾಗಿರುತ್ತದೆ ಎಂದಿದ್ದಾರೆ.
ಸಂವಿಧಾನದ ಶ್ರೇಷ್ಠತೆ ಮತ್ತು ವಿಫಲತೆ ಅದು ಯಾರ ಕೈಯಲ್ಲಿದೆ ಎನ್ನುವವರ ಆಧಾರದ ಮೇಲೆ ನಿರ್ಧಾರವಾಗುತ್ತದೆ ಎನ್ನುವ ಅಂಬೇಡ್ಕರ್ ಅವರ ಮಾತು ಹಾಗೂ ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಕುವೆಂಪು ಅವರ ಮಾತುಗಳನ್ನು ಉಲ್ಲೇಖಿಸಿ ಪಾಠ ಮುಂದುವರೆಸಿದ್ದಾರೆ.
ನಮ್ಮ ದೇಶದ ಸಂವಿಧಾನದ ಪೀಠಿಕೆಯಲ್ಲಿ ಇಡೀ ಸಂವಿಧಾನದ ಸಾರಾಂಶ ಇದೆ. ಜಾತ್ಯತೀತತೆ, ಸಾಮಾಜಿಕ ನ್ಯಾಯ ಎರಡೂ ಮೂಲ ಸಂವಿಧಾನದಲ್ಲಿ ಇರಲಿಲ್ಲ. ಬಳಿಕ 42ನೇ ತಿದ್ದುಪಡಿಯ ಮೂಲಕ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಕಾಲದಲ್ಲಿ ಸೇರ್ಪಡೆಯಾಯಿತು. ಅದನ್ನು ತೆಗೆಯಬೇಕು ಎಂದು ಕೆಲವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಿತು. ಭಾರತದಲ್ಲಿ ಅಸಮಾನತೆ ಸೃಷ್ಟಿಯಾಗಿದ್ದು ಜಾತಿ ವ್ಯವಸ್ಥೆಯಿಂದ. ಈ ಜಾತಿ ಆಧಾರದ ಮೇಲೆ ಒಬ್ಬರ ಯೋಗ್ಯತೆ ಅಳೆಯುವುದು ಅನಾಗರಿಕತನ ಎಂದು ಹೇಳಿದ್ದಾರೆ.
ನಮ್ಮ ಸಂವಿಧಾನದ ಹಕ್ಕುಗಳು ಏನೇನು ಅಂತ ಗೊತ್ತಿದ್ದರೆ ಮಾತ್ರ ಅವುಗಳನ್ನು ಪಡೆದುಕೊಳ್ಳಬಹುದು. ಏಳು ಸ್ವಾತಂತ್ರ್ಯಗಳನ್ನು ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ನೀಡಿದೆ. ಇದನ್ನೆಲ್ಲಾ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಅಲ್ಲದೇ ಸಂವಿಧಾನದ ಧ್ಯೇಯೋದ್ದೇಶ ಹಾಗೂ ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…