ರಾಜ್ಯ

ವಿದ್ಯಾರ್ಥಿಗಳಿಗೆ ಸಂವಿಧಾನ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನದಲ್ಲಿ ಕಂದಾಚಾರಗಳಿಗೆ ಅವಕಾಶವಿಲ್ಲ. ಅದು ಕೇವಲ ಒಂದು ಜಾತಿ ಅಥವಾ ಒಂದು ಧರ್ಮಕ್ಕೆ ಮಾತ್ರ ಸೀಮಿತವಲ್ಲ, ಈ ದೇಶಕ್ಕೆ ಸೀಮಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು(ಡಿ.3) ಸಂವಿಧಾನ ಓದು ಅಭಿಯಾನ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಭಾರತ ಬಹುತ್ವದ ದೇಶ. ಎಲ್ಲಾ ಜಾತಿ, ಧರ್ಮದವರಿಗೆ ಸಮಾನವಾಗಿ ನಡೆಸಿಕೊಳ್ಳುವುದು ನಮ್ಮ ದೇಶದ ಗುಣ. ಇದೇ ಸಂವಿಧಾನದ ಮೌಲ್ಯ. ಸಂವಿಧಾನದ ಬಗ್ಗೆ ಗೌರವ ಇಲ್ಲದವರ ಕೈಗೆ ಹೋದರೆ, ಎಷ್ಟೇ ಒಳ್ಳೆ ಸಂವಿಧಾನ ಆದರೂ ಪರಿಣಾಮ ಕೆಟ್ಟದಾಗಿರುತ್ತದೆ ಎಂದಿದ್ದಾರೆ.

ಸಂವಿಧಾನದ ಶ್ರೇಷ್ಠತೆ ಮತ್ತು ವಿಫಲತೆ ಅದು ಯಾರ ಕೈಯಲ್ಲಿದೆ ಎನ್ನುವವರ ಆಧಾರದ ಮೇಲೆ ನಿರ್ಧಾರವಾಗುತ್ತದೆ ಎನ್ನುವ ಅಂಬೇಡ್ಕರ್ ಅವರ ಮಾತು ಹಾಗೂ ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಕುವೆಂಪು ಅವರ ಮಾತುಗಳನ್ನು ಉಲ್ಲೇಖಿಸಿ ಪಾಠ ಮುಂದುವರೆಸಿದ್ದಾರೆ.

ನಮ್ಮ ದೇಶದ ಸಂವಿಧಾನದ ಪೀಠಿಕೆಯಲ್ಲಿ ಇಡೀ ಸಂವಿಧಾನದ ಸಾರಾಂಶ ಇದೆ. ಜಾತ್ಯತೀತತೆ, ಸಾಮಾಜಿಕ ನ್ಯಾಯ ಎರಡೂ ಮೂಲ ಸಂವಿಧಾನದಲ್ಲಿ ಇರಲಿಲ್ಲ. ಬಳಿಕ 42ನೇ ತಿದ್ದುಪಡಿಯ ಮೂಲಕ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಕಾಲದಲ್ಲಿ ಸೇರ್ಪಡೆಯಾಯಿತು. ಅದನ್ನು ತೆಗೆಯಬೇಕು ಎಂದು ಕೆಲವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್ ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಿತು. ಭಾರತದಲ್ಲಿ ಅಸಮಾನತೆ ಸೃಷ್ಟಿಯಾಗಿದ್ದು ಜಾತಿ ವ್ಯವಸ್ಥೆಯಿಂದ. ಈ ಜಾತಿ ಆಧಾರದ ಮೇಲೆ ಒಬ್ಬರ ಯೋಗ್ಯತೆ ಅಳೆಯುವುದು ಅನಾಗರಿಕತನ ಎಂದು ಹೇಳಿದ್ದಾರೆ.

ನಮ್ಮ ಸಂವಿಧಾನದ ಹಕ್ಕುಗಳು ಏನೇನು ಅಂತ ಗೊತ್ತಿದ್ದರೆ ಮಾತ್ರ ಅವುಗಳನ್ನು ಪಡೆದುಕೊಳ್ಳಬಹುದು. ಏಳು ಸ್ವಾತಂತ್ರ್ಯಗಳನ್ನು ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ನೀಡಿದೆ. ಇದನ್ನೆಲ್ಲಾ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಅಲ್ಲದೇ ಸಂವಿಧಾನದ ಧ್ಯೇಯೋದ್ದೇಶ ಹಾಗೂ ಆಶಯಗಳನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ತಿಳಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

7 mins ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

12 mins ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

3 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

3 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

4 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

4 hours ago