ರಾಜ್ಯ

ಮಲ್ಲಿಕಾರ್ಜುನ ಖರ್ಗೆಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳನ್ನ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರಿಗೂ ಧನ್ಯವಾದ ಅರ್ಪಿಸಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ:

ಇಂದು ದೇಶಾದ್ಯಂತ ಜನರು ನಮ್ಮ ಸರ್ಕಾರದ ‘ಕರ್ನಾಟಕ ಮಾದರಿ’ ಆಡಳಿತವನ್ನು ಪಕ್ಷಾತೀತ ಮಾನದಂಡವೆಂದು ಗುರುತಿಸುತ್ತಾರೆ. ಪ್ರಣಾಳಿಕೆಯ ಕರಡು ರಚನೆಯಲ್ಲಿ ಅವಕಾಶ ನೀಡಿರುವುದು ಎಐಸಿಸಿಯ ಈ ‘ಕರ್ನಾಟಕ ಮಾದರಿಯ ಮನ್ನಣೆ’ ಎಂದು ನಾನು ಭಾವಿಸುತ್ತೇನೆ.

ಒಂದು ಪಕ್ಷದ ಪ್ರಣಾಳಿಕೆಯು ಕೇವಲ ಮತದಾರರಿಗೆ ನೀಡುವ ಭರವಸೆಗಳ ಪಟ್ಟಿಯಲ್ಲ; ಇದು ನಾವು ಜನರಿಗೆ ಮಾಡುವ ಬದ್ಧತೆಯಾಗಿದೆ ಮತ್ತು ಅದನ್ನು ಅನುಷ್ಠಾನಗೊಳಿಸುವುದು ಆಡಳಿತದ ನಿಜವಾದ ಸಾರವಾಗಿದೆ. ನಮ್ಮ ಹಿಂದಿನ ಸರಕಾರ ಪ್ರಣಾಳಿಕೆಯಲ್ಲಿದ್ದ ಶೇ.95ಕ್ಕೂ ಹೆಚ್ಚು ಭರವಸೆಗಳನ್ನು ಜಾರಿಗೊಳಿಸಿ, ಸಮಾನ ಅವಕಾಶ ಹಾಗೂ ಸಮತೋಲಿತ ಅಭಿವೃದ್ಧಿ ಕಲ್ಪಿಸಿ, ಆ ಮೂಲಕ ಜನರ ವಿಶ್ವಾಸ ಗಳಿಸಿತ್ತು. ಪ್ರಸ್ತುತ ಸರಕಾರವೂ ಅದೇ ಹಾದಿಯಲ್ಲಿ ಮುನ್ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ನಾಡಿನ ಜನತೆಗೂ ಕರ್ನಾಟಕ ಮಾದರಿ ಆಡಳಿತದ ಅನುಕೂಲಗಳು ದೊರೆಯಲಿ ಎಂದು ಆಶಿಸುತ್ತೇನೆ.

ನನ್ನ ಎಲ್ಲಾ ಕಲ್ಯಾಣ ಮತ್ತು ಮೂಲಸೌಕರ್ಯ ಉಪಕ್ರಮಗಳನ್ನು ಬೆಂಬಲಿಸಿದ್ದಕ್ಕಾಗಿ ಪಕ್ಷದ ಹಿರಿಯ ನಾಯಕರಾದ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನಾನು ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

andolanait

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

1 hour ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

4 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

6 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

6 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

6 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

6 hours ago