ರಾಜ್ಯ

ಮಲ್ಲಿಕಾರ್ಜುನ ಖರ್ಗೆಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳನ್ನ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರಿಗೂ ಧನ್ಯವಾದ ಅರ್ಪಿಸಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ:

ಇಂದು ದೇಶಾದ್ಯಂತ ಜನರು ನಮ್ಮ ಸರ್ಕಾರದ ‘ಕರ್ನಾಟಕ ಮಾದರಿ’ ಆಡಳಿತವನ್ನು ಪಕ್ಷಾತೀತ ಮಾನದಂಡವೆಂದು ಗುರುತಿಸುತ್ತಾರೆ. ಪ್ರಣಾಳಿಕೆಯ ಕರಡು ರಚನೆಯಲ್ಲಿ ಅವಕಾಶ ನೀಡಿರುವುದು ಎಐಸಿಸಿಯ ಈ ‘ಕರ್ನಾಟಕ ಮಾದರಿಯ ಮನ್ನಣೆ’ ಎಂದು ನಾನು ಭಾವಿಸುತ್ತೇನೆ.

ಒಂದು ಪಕ್ಷದ ಪ್ರಣಾಳಿಕೆಯು ಕೇವಲ ಮತದಾರರಿಗೆ ನೀಡುವ ಭರವಸೆಗಳ ಪಟ್ಟಿಯಲ್ಲ; ಇದು ನಾವು ಜನರಿಗೆ ಮಾಡುವ ಬದ್ಧತೆಯಾಗಿದೆ ಮತ್ತು ಅದನ್ನು ಅನುಷ್ಠಾನಗೊಳಿಸುವುದು ಆಡಳಿತದ ನಿಜವಾದ ಸಾರವಾಗಿದೆ. ನಮ್ಮ ಹಿಂದಿನ ಸರಕಾರ ಪ್ರಣಾಳಿಕೆಯಲ್ಲಿದ್ದ ಶೇ.95ಕ್ಕೂ ಹೆಚ್ಚು ಭರವಸೆಗಳನ್ನು ಜಾರಿಗೊಳಿಸಿ, ಸಮಾನ ಅವಕಾಶ ಹಾಗೂ ಸಮತೋಲಿತ ಅಭಿವೃದ್ಧಿ ಕಲ್ಪಿಸಿ, ಆ ಮೂಲಕ ಜನರ ವಿಶ್ವಾಸ ಗಳಿಸಿತ್ತು. ಪ್ರಸ್ತುತ ಸರಕಾರವೂ ಅದೇ ಹಾದಿಯಲ್ಲಿ ಮುನ್ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ನಾಡಿನ ಜನತೆಗೂ ಕರ್ನಾಟಕ ಮಾದರಿ ಆಡಳಿತದ ಅನುಕೂಲಗಳು ದೊರೆಯಲಿ ಎಂದು ಆಶಿಸುತ್ತೇನೆ.

ನನ್ನ ಎಲ್ಲಾ ಕಲ್ಯಾಣ ಮತ್ತು ಮೂಲಸೌಕರ್ಯ ಉಪಕ್ರಮಗಳನ್ನು ಬೆಂಬಲಿಸಿದ್ದಕ್ಕಾಗಿ ಪಕ್ಷದ ಹಿರಿಯ ನಾಯಕರಾದ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನಾನು ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

andolanait

Recent Posts

ಓದುಗರ ಪತ್ರ: ಜಾತಿ ಗಣತಿ…

ಜಾತಿ ಗಣತಿ... ಒಬ್ಬೊಬ್ಬರದು ಒಂದೊಂದು ರೀತಿಯ ಲೆಕ್ಕಾಚಾರ... ಅವರವರ ಪ್ರಕಾರ! ಕೆಲವರದು ಗುಣಾಕಾರ ಮತ್ತೆ ಕೆಲವರದು ಭಾಗಾಕಾರ ಯಾವ ಆಕಾರ…

2 hours ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾದ ಮಹಾತ್ಮ ಗಾಂಧಿ ರಸ್ತೆಯ ತೇರಾಪಂಥ್ ಭವನದ ಬಳಿ ರಸ್ತೆ ಹಾಳಾಗಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಈ…

2 hours ago

ಓದುಗರ ಪತ್ರ: ಜಾತಿಗಣತಿ ಪಾರದರ್ಶಕವಾಗಿರಲಿ

ಜಾತಿ ಗಣತಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಆದರೆ ಈ…

2 hours ago

ಗುಜರಾತ್ ನಿರ್ಣಯ ಕಾಂಗ್ರೆಸ್ಸನ್ನು ಪುನಶ್ಚೇತನಗೊಳಿಸುವುದೇ?

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷವು ಕಳೆದ…

2 hours ago

ಕರಿಘಟ್ಟವೆಂಬ ಹಸಿರು ತುಂಬಿದ ಬೆಟ್ಟ

ಸಿರಿ ಮೈಸೂರು ಇಂತಹದೊಂದು ಶಾಂತ ಸುಂದರ ತಾಣ ಇರುವುದು ಮೈಸೂರಿನಿಂದ ಕೇವಲ ಅರ್ಧ ತಾಸು ದೂರದಲ್ಲಿ. ಅದೊಂದು ಪ್ರಶಾಂತವಾದ, ಹಸಿರು…

2 hours ago

ಮೇಲುಕೋಟೆಯ ಹೊಸ ಜೀವನ ದಾರಿ

ಶಿಕ್ಷಣವನ್ನು ಹೊಸ ಬೆಳಕಿನಲ್ಲಿ ನೋಡುವ ವಿಶಿಷ್ಟ ಪ್ರಯತ್ನ ಇದು ವೇದ ಭದ್ರಾವತಿ ಅದೊಂದು ತಿಳಿಬೆಳಗು - ಗೆಳತಿಯರೊಂದಿಗೆ ‘ಹೊಸ ಜೀವನ ದಾರಿ’ಗೆ…

2 hours ago