ರಾಜ್ಯ

ಭ್ರಷ್ಟಾಚಾರ ರಹಿತ ಕೆಪಿಎಸ್‌ಸಿ ಪರೀಕ್ಷೆ ನಡೆಸಲು AI ತಂತ್ರಜ್ಞಾನ ಅಳವಡಿಕೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ನಡೆಸಲು ಮುಂದಿನಗಳಲ್ಲಿ AI ತಂತ್ರಜ್ಞಾನವನ್ನು ಅಳವಡಿಕೆ ಮಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಇಂದು(ಜನವರಿ.11) ರಾಜ್ಯ ಲೋಕಸೇವಾ ಆಯೋಗದ ವತಿಯಿಂದ ಆಯೋಜಿಸಲಾಗಿದ್ದ 25ನೇ ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಿ.ಸಿ. ಹೋಟಾ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಸರ್ಕಾರ ಅನೇಕ ಮುಖ್ಯ ಸುಧಾರಣೆಗಳನ್ನು ಜಾರಿಮಾಡಿದೆ. ಅವುಗಳಲ್ಲಿ ಗ್ರೂಪ್ ಸಿ ಹುದ್ದೆಗಳಿಗೆ ಸಂದರ್ಶನವನ್ನು ರದ್ದುಗೊಳಿಸುವುದು. ಜೊತೆಗೆ ಗ್ರೂಪ್ ಬಿ ಹುದ್ದೆಗಳಿಗೆ ಹಾಗೂ ಗೆಜೆಟೆಡ್ ಪ್ರೋಬೇಶನರ್ಸ್ ಪರೀಕ್ಷೆಗಳಲ್ಲಿ ಸಂದರ್ಶನದ ಅಂಕಗಳನ್ನು ಕಡಿತಗೊಳಿಸಲಾಗುವುದು. ನ್ಯಾಯಯುತ ಹಾಗೂ ಪಾರದರ್ಶಕತೆಯನ್ನು ಪ್ರೋತ್ಸಾಹಿಸಲು ನೇಮಕಾತಿ ಮಾದರಿಗಳನ್ನು ಸರಳೀಕೃತಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಲೋಕಸೇವಾ ಆಯೋಗಗಳು ನ್ಯಾಯಪರತೆ ಹಾಗೂ ಅರ್ಹತೆಯನ್ನು ಎತ್ತಿ ಹಿಡಿದು ಕಾರ್ಯಾಂಗಕ್ಕೆ ಅಭೂತ ಪೂರ್ವ ಕೊಡುಗೆ ನೀಡುವಂತಹ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳಾಗಿವೆ. ಅಲ್ಲದೇ ಸಾರ್ವಜನಿಕ ಸೇವೆ ಕಾರ್ಯ ಮಾಡುವಲ್ಲಿ ನಮ್ಮ ರಾಜ್ಯಕ್ಕೆ ಶ್ರೀಮಂತ ಐತಿಹ್ಯವಿದೆ. ಕರ್ನಾಟಕ ಲೋಕ ಸೇವಾ ಆಯೋಗ 2021ರಲ್ಲಿ ತನ್ನ ನಿಯಮಗಳನ್ನು ಪರಿಚಯಿಸಿದ್ದು, ಇದು ವ್ಯಕ್ತಿತ್ವ ಪರೀಕ್ಷೆಯ ಮೌಲ್ಯಕ್ಕಿಂತ, ಪ್ರಮಾಣೀಕರಿಸಿದ ಪ್ರಕ್ರಿಯೆಗಳಿಗೆ ಒತ್ತು ನೀಡಿದೆ. ಪ್ರಶ್ನೆಪತ್ರಿಕೆ ಸೋರಿಕೆಗಳಂತಹ ಸವಾಲುಗಳನ್ನು ಎದುರಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಹೀಗಾಗಿ ಪಾರದರ್ಶಕತೆಯನ್ನು ಖಾತ್ರಿಗೊಳಿಸಲು ಹಾಗೂ ಸಾರ್ವಜನಿಕರ ವಿಶ್ವಾಸಗಳಿಸಲು ಸದೃಢವಾದ ಕ್ರಮಗಳನ್ನು ಅನುಷ್ಠಾನಗೊಳಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಇನ್ನೂ ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗವೂ, ನ್ಯಾಯಯುತ ಹಾಗೂ ತ್ವರಿತ ನೇಮಕಾತಿ ಪ್ರಕ್ರಿಯೆಗಳನ್ನು ನಡೆಸುವಂತೆ ಬೇಡುತ್ತದೆ. ಈ ಕಾರಣಕ್ಕೆ ಯುಪಿಎಸ್‌ಸಿ ನಡೆಸುವಂತೆ ಸಕಾಲಕ್ಕೆ ಫಲಿತಾಂಶ ಪ್ರಕಟಿಸಲು ಮಾದರಿಯಾಗಬಲ್ಲದು. ಅಲ್ಲದೇ ಕೆಪಿಎಸ್‌ಸಿ ಆಯೋಗಗಳ ವಿರುದ್ಧ ಇರುವ ಬ್ಯಾಕ್ ಲಾಗ್ ಪ್ರಕರಣಗಳನ್ನು ಬಗೆಹರಿಸುವುದು ದಕ್ಷತೆಯ ಸುಧಾರಣೆ ಹಾಗೂ ಸಾರ್ವಜನಿಕರ ವಿಶ್ವಾಸಾರ್ಹತೆಯನ್ನುಗಳಿಸಿಕೊಳ್ಳಲು ಮುಖ್ಯವಾಗಿದೆ. ಕೆಪಿಎಸ್‌ಸಿಯನ್ನು ಸದೃಢಗೊಳಿಸಲು ಹೆಚ್ಚಿನ ಸಂಪನ್ಮೂಲಗಳು, ಸಿಬ್ಬಂದಿ ಹಾಗೂ ಮೂಲ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಕೆಪಿಎಸ್‌ಸಿ ಪರೀಕ್ಷೆ AI ಅವಳಡಿಕೆ

ದೇಶದ ಬೇರೆ ಬೇರೆ ರಾಜ್ಯಗಳು ಅನುಸರಿಸುವ ಮಾರ್ಗಗಳು ಹಾಗೂ ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಾಗುವುದು. ಇದರಿಂದ ಹೆಚ್ಚು ಪಾರದರ್ಶಕ ಹಾಗೂ ಭ್ರಷ್ಟಾಚಾರ ರಹಿತವಾಗಿ ಮಾಡಲಾಗುವುದು. ಸ್ವತಂತ್ರ ಪರೀಕ್ಷಾ ನಿಯಂತ್ರಕರ ಹುದ್ದೆಗಳನ್ನು ಸೃಜಿಸುವ ಮುಖಾಂತರ ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾದ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ನಂಬಿಕೆಯಿರಿಸಿದೆ ಎಂದು ಹೇಳಿದ್ದಾರೆ.

ಇನ್ನೂ ರಾಜ್ಯದಲ್ಲಿ ಉತ್ತಮ ಆಡಳಿತಕ್ಕಾಗಿ ಸರ್ಕಾರಿ ನೌಕರರಿಗೆ ಉತ್ತಮ ಗುಣಮಟ್ಟದ ಸೇವೆಗಾಗಿ ತರಬೇತಿ ನೀಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಇಂದು ನಡೆಯುತ್ತಿರುವ ಸಮ್ಮೇಳನದ ಮೂಲಕ ಶಕ್ತಿ ತುಂಬಲಿದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

44 mins ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

56 mins ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

1 hour ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

1 hour ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

3 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

3 hours ago