ರಾಜ್ಯ

ನಾನು ಜೆಡಿಎಸ್‌ ಪಕ್ಷ ಬಿಡಲಿಲ್ಲ, ನನ್ನನ್ನು ಉಚ್ಛಾಟಿಸಲಾಯಿತು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ಜೆಡಿಎಸ್‌ ಪಕ್ಷವನ್ನು ಬಿಡಲಿಲ್ಲ ನನ್ನನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪಕ್ಷದಿಂದ ಉಚ್ಛಾಟನೆ ಮಾಡಿದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು(ಡಿ.1) ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್‌ನಿಂದ ನನ್ನನ್ನು ಉಚ್ಛಾಟಿಸಲಾಯಿತೇ ಹೊರತು ನಾನು ಪಕ್ಷವನ್ನು ತೊರೆದು ಬರಲಿಲ್ಲ. ಅವರು ಹೇಳಿದ್ದನ್ನು ಮಾಧ್ಯಮಗಳು ಹೇಳುವುದಾದರೆ ಮಾಧ್ಯಮಗಳು ಯಾಕಿರಬೇಕು? ಎಂದು ಪ್ರಶ್ನಿಸಿದರು.

ಜೆಡಿಎಸ್ ಪಕ್ಷವನ್ನು ಕಟ್ಟಿದವರು ನಾವು. ಜೆಡಿಎಸ್ ಈಗ ಜಾತ್ಯಾತೀತವಾಗಿ ಉಳಿದಿದೆಯೇ ?ಕೋಮುವಾದಿಗಳ ಜೊತೆಗೆ ಸೇರಿದ ಮೇಲೆ ಯಾವ ಸೆಕ್ಯುಲರ್ ಆಗಿದೆ ? ಸಂವಿಧಾನದಲ್ಲಿ ಜಾತ್ಯಾತೀತ, ಸಮಾಜವಾದಿ ಎಂದು ಸೇರ್ಪಡೆಯಾಗಿದೆ. ಸರ್ವೋಚ್ಚ ನ್ಯಾಯಾಲಯವೂ ಜಾತ್ಯಾತೀತ ಇರಲೇಬೇಕೆಂದು ಆದೇಶ ಹೊರಡಿಸಿದೆ ಎಂದರು.

ಜೆಡಿಎಸ್ನವರಿಗೆ ಪಕ್ಷವನ್ನು ಯಾವ ಹಿನ್ನೆಲೆಯಲ್ಲಿ ಕಟ್ಟಲಾಗಿದೆ ಎಂದು ಗೊತ್ತಿಲ್ಲ. ಪಕ್ಷ ರಚನೆಗೊಂಡಾಗ ಕುಮಾರಸ್ವಾಮಿ ಪಕ್ಷದಲ್ಲೇ ಇರಲಿಲ್ಲ . ಎಚ್‌.ಡಿ.ದೇವೇಗೌಡರು, ನಾನು, ಇಬ್ರಾಹಿಂ, ಸತೀಶ್ ಜಾರಕಿಹೊಳಿ, ಮಹದೇವಪ್ಪ, ವೆಂಕಟೇಶ್, ಲಕ್ಷ್ಮೀ ಸಾಗರ್ ಸೇರಿ ಪಕ್ಷವನ್ನು ಕಟ್ಟಿದ್ದು. ಆ ವೇಳೆ ಎಚ್‌.ಡಿ.ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾದರು, ನಾನು ರಾಜ್ಯಾಧ್ಯಕ್ಷನಾದೆ ಎಂದು ಹೇಳಿದರು.

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಯೇನು?
ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್‌ ಪಕ್ಷ ತೊರೆದು ಹೋಗುವಾಗ ಮಾಡಿದ ನಾಟಕವನ್ನೇ ಈಗ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದೇ ಸಂದರ್ಭದಲ್ಲಿ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧದ ಎಫ್‌ಐಆರ್‌ ಪ್ರಕರಣದಲ್ಲಿ ಪೊಲೀಸರು ಕಾನೂನಿನ ದೃಷ್ಟಿಯಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತಾರೆ. ಕಾನೂನಿನ ಮಿತಿಯಲ್ಲಿ ಬಂದರೆ ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಲ್ಲವಾದರೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

 

 

 

 

ಅರ್ಚನ ಎಸ್‌ ಎಸ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

3 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

3 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

4 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

4 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

4 hours ago