ರಾಜ್ಯ

ನಾವು ಸಂವಿಧಾನ ರಕ್ಷಿಸಿದರೆ, ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಾವು ಸಂವಿಧಾನ ರಕ್ಷಿಸಿದರೆ, ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ. ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಜನವರಿ.21) ಕಾಂಗ್ರೆಸ್‌ ವತಿಯಿಂದ ಆಯೋಜಿಸಲಾಗಿದ್ದ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶದಲ್ಲಿ ಮಾತನಾಡಿದ ಅವರು, ಸಂವಿಧಾನ ದ್ವೇಷಿಯಾಗಿರುವ ಆರ್‌ಎಸ್‌ಎಸ್‌
ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದಾರೆ. ಇದನ್ನು ನಾವು ಸಮಾಜದಲ್ಲಿ ಹಿಮ್ಮೆಟ್ಟಿಸಬೇಕಾಗಿದೆ ಎಂದರು.

ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದ್ದು, ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕಾಗಿದೆ. ಈ ನಿಟ್ಟಿನಲ್ಲಿ ನಮಗೆ ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‌ ಅವರೇ ಮಾರ್ಗದರ್ಶಕರಾಗಿದ್ದಾರೆ ಎಂದು ಹೇಳಿದರು.

ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ ಮತ್ತು ಮರೆಯುವುದಿಲ್ಲ. ನಮ್ಮ ದೇಶದಲ್ಲಿ ಹಲವು ಭಾಷೆ, ಜಾತಿ ಹಾಗೂ ಧರ್ಮ‌ಗಳಿರುವುದೇ ಭಾರತದ ಶಕ್ತಿಯಾಗಿದೆ. ಹೀಗಿರುವಾಗ ಬಿಜೆಪಿ ಪರಿವಾರ ಗಾಂಧಿ, ಅಂಬೇಡ್ಕರ್‌ ಅವರನ್ನು ದ್ವೇಷಿಸುತ್ತದೆ. ಆದರೆ ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ ಮತ್ತು ವಿಸ್ತರಿಸುತ್ತೇವೆ ಎಂದು ತಿಳಿಸಿದರು.

ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್‌ನಲ್ಲಿ 52 ಸಾವಿರ ಕೋಟಿ ರೂಪಾಯಿಗಳನ್ನು ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

3 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

3 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

3 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

3 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

3 hours ago