ರಾಜ್ಯ

ಮುಡಾ ಹಗರಣ| ನನ್ನ ಪತ್ನಿಗೆ ಇ.ಡಿ. ನೋಟಿಸ್‌ ನೀಡಿರುವುದು ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ಸಂಸ್ಥೆಯೂ ನನ್ನ ಪತ್ನಿ ಪಾರ್ವತಿ ಅವರಿಗೆ ನೋಟಿಸ್‌ ಜಾರಿ ಮಾಡಿರುವುದು ರಾಜಕೀಯ ಪ್ರೇರಿತವಾಗಿದೆ. ಆದರೆ ನಮಗೆ ನ್ಯಾಯಾಲಯದಿಂದ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಜನವರಿ.28) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಹಗರಣದಲ್ಲಿ ಇ.ಡಿ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿರುವುದು ರಾಜಕೀಯ ಪ್ರೇರಿತವಲ್ಲದೇ ಮತ್ತೇನು? ಮುಡಾ ಹಗರಣವೇ ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ನನ್ನ ಪತ್ನಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅನ್ವಯ ವಿಚಾರಣೆ ನಡೆಸಿದ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ ಎಂದರು.

ಮುಡಾ ಹಗರಣದ ಬಗ್ಗೆ ಯಾಕಿಷ್ಟು ಆತುರ ಮಾಡುತ್ತಿದ್ದೀರಾ? ಅದರ ಕುರಿತು ಇನ್ನೂ ತನಿಖೆ ನಡೆಯುತ್ತಿದೆ. ಅಲ್ಲದೇ ಹೈಕೋರ್ಟ್‌ ನಿನ್ನೆ(ಜನವರಿ.27) ಸಿಬಿಐಗೆ ನೀಡಬೇಕಾ? ಅಥವಾ ಬೇಡವಾ? ಎನ್ನುವ ಬಗ್ಗೆ ಚರ್ಚೆ ಆಗುತ್ತಿದ್ದು, ನ್ಯಾಯಾಲಯ ತನ್ನ ಆದೇಶವನ್ನು ಕಾಯ್ದಿರಿಸಿದೆ. ಹೀಗಿರುವಾಗ ಆತುರ ಮಾಡುವುದು ಸರಿಯಲ್ಲ. ಆದರೆ ನನಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸಮರ್ಥನೆ

ಇದೇ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಕುಂಭಮೇಳದಲ್ಲಿ ಸ್ನಾನ ಮಾಡಿದ್ರೆ ಬಡತನ ನಿರ್ಮೂಲನೆ ಆಗುತ್ತಾ ಎಂದು ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಸಿದ್ದರಾಮಯ್ಯ ಅವರು, ಕುಂಭ ಸ್ನಾನದ ಕುರಿತು ಮಲ್ಲಿಕಾರ್ಜುನ ಖರ್ಗೆ ನೀಡಿರೋ ಹೇಳಿಕೆ ಬಗ್ಗೆ ಅವರನ್ನೇ ಕೇಳಿ. ಆದರೆ ಈ ವಿಚಾರದಲ್ಲಿ ನನ್ನ ಅಭಿಪ್ರಾಯದಂತೆ ಇದು ನಮ್ಮ ಸಂಪ್ರದಾಯ ಅಷ್ಟೇ ಎಂದರು.

ಕುಂಭಮೇಳದಲ್ಲಿ ಸ್ನಾನ ಮಾಡೋರು, ಗಂಗೆಯಲ್ಲಿ ಸ್ನಾನ ಮಾಡೋದು ಪಾಪ ಪರಿಹಾರ ಆಗುತ್ತೆ ಎನ್ನುವ ನಂಬಿಕೆ ಇದೆ. ಆದರೆ ನಾವೆಲ್ಲ ಬಸವಣ್ಣನವರ ಅನುಯಾಯಿಗಳು. ಪಾಪ, ಪುಣ್ಯ ಎಲ್ಲಾ ಹೆಂಗೆ? ಅಯ್ಯಾ ಎಂದರೆ ಸ್ವರ್ಗ… ಎಲವೋ ಎಂದರೆ ನರಕ ಅನ್ನೋದರಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ ಎನ್ನುವ ಮೂಲಕ ಖರ್ಗೆ ಅವರ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

6 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

6 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

6 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

6 hours ago