ಬೆಂಗಳೂರು: ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದ್ದು, ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸುವ ದುರಾಲೋಚನೆಯ ಪ್ರಯತ್ನ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಮಾಧ್ಯಮವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಹಲವಾರು ದೋಷಗಳಿಂದ ಕೂಡಿರುವ ಈಗಿನ ಚುನಾವಣಾ ವ್ಯವಸ್ಥೆಯನ್ನು ಸುಧಾರಣೆಗೊಳಪಡಿಸುವ ತುರ್ತು ಅಗತ್ಯವಿರುವ ಈ ಸಂದರ್ಭದಲ್ಲಿ ಇಂತಹ ಮಸೂದೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸಲಿದೆ. ಇಂತಹದ್ದೊಂದು ಮುಖ್ಯವಾದ ಮಸೂದೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಪಡೆಯುವ ಮೊದಲು ವಿರೋಧಪಕ್ಷಗಳು ಮತ್ತು ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಬೇಕಾಗಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಸರ್ವಾಧಿಕಾರಿ ಧೋರಣೆಯಿಂದ ಈ ಮಸೂದೆಯನ್ನು ದೇಶದ ಮೇಲೆ ಹೇರಲು ಹೊರಟಿದೆ ಎಂದು ಆರೋಪಿಸಿದ್ದಾರೆ.
ಕೇರಳ ಸರ್ಕಾರ ಈಗಾಗಲೇ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾಪವನ್ನು ವಿರೋಧಿಸಿ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟಿದೆ. ಅಗತ್ಯ ಬಿದ್ದರೆ ನಮ್ಮ ಸರ್ಕಾರ ಸಹ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ವಿರುದ್ದ ಬಹುಮತದ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಲಾಗುವುದು ಎಂದು ಹೇಳಿದ್ದಾರೆ.
ಲೋಕಸಭೆ ಇಲ್ಲವೇ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಈ ಪ್ರಸ್ತಾಪದಲ್ಲಿ ಪರಿಹಾರವೇ ಇಲ್ಲ ಎಂದರು. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ವಿಧಿಗಳಿಗೆ ತಿದ್ದುಪಡಿ ತರಬೇಕಾಗಿದೆ. ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣೆ ಆಯೋಗಕ್ಕೆ ಇಲ್ಲ. ನರೇಂದ್ರ ಮೋದಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಆಗಾಗ ಇಂತಹ ಗಿಮಿಕ್ ಗಳನ್ನು ಪ್ರದರ್ಶಿಸುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…