ರಾಜ್ಯ

ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಸಮಾಜದ ಆಸ್ತಿ, ಅವರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಅವರು ಸಮಾಜದ ಆಸ್ತಿಯಾಗಿದ್ದಾರೆ. ಅವರ
ಸಬಲೀಕರಣಕ್ಕಾಗಿ ಯಾವಾಗಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು(ಡಿ.3) ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡಲಾಗುವುದು ಎಂದಿದ್ದಾರೆ.

ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಅವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ , ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಪ್ಯಾರಾ ಒಲಂಪಿಕ್ಸ್ ನಲ್ಲಿ ಭಾರತದ ವಿಕಲಚೇತನ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

3 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

3 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

3 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

3 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

3 hours ago