ರಾಜ್ಯ

ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಸಮಾಜದ ಆಸ್ತಿ, ಅವರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಅವರು ಸಮಾಜದ ಆಸ್ತಿಯಾಗಿದ್ದಾರೆ. ಅವರ
ಸಬಲೀಕರಣಕ್ಕಾಗಿ ಯಾವಾಗಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು(ಡಿ.3) ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡಲಾಗುವುದು ಎಂದಿದ್ದಾರೆ.

ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಅವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ , ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಪ್ಯಾರಾ ಒಲಂಪಿಕ್ಸ್ ನಲ್ಲಿ ಭಾರತದ ವಿಕಲಚೇತನ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

2 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

2 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

2 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

2 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

12 hours ago