Mysore
31
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಪ್ರಧಾನಿ ಮೋದಿ ಭೇಟಿಯಾಗಲು ದೆಹಲಿಗೆ ಹೊರಟ ಸಿದ್ದರಾಮಯ್ಯ

ಬೆಂಗಳೂರು ; ಮೂರನೇ ಬಾರಿ ಪ್ರಧಾನಿಯಾಗಿರುವ ನರೇಂದ್ರ  ಮೋದಿ ಅವರನ್ನ ಭೇಟಿ ಮಾಡಲು ಜೂನ್ 29ರ ರಾತ್ರಿ 8 ಗಂಟೆಗೆ ಸಮಯ ನಿಗದಿಯಾಗಿರುವ ಹಿನ್ನೆಲೆ ಇಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಈ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ , ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದೆ. ಪ್ರಧಾನಿ ಹಾಗೂ ಕೇಂದ್ರದ ಹಲವು ಸಚಿವರ ಜತೆ ಮಾತುಕತೆ ನಡೆಸಲಿದ್ದೇನೆ. ಇದಕ್ಕಾಗಿ ಇಂದೇ ದೆಹಲಿಗೆ ತೆರಳಲಿದ್ದೇನೆ. ದೆಹಲಿಗೆ ತೆರಳುವ ಮುನ್ನ ಇಂದು ರಾಜ್ಯದ ಸಂಸದರ ಜೊತೆ ಸಭೆ ನಡೆಸುತ್ತೇನೆ. ರಾಜ್ಯಕ್ಕೆ ಬರಬೇಕಿರುವ ಅನುದಾನ, ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಸಂಗ್ರಹಲಿದ್ದೇನೆ ಎಂದು ತಿಳಿಸಿದರು.

ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಅನುಷ್ಠಾನಗೊಳಿಸಬೇಕಿರುವ ಯೋಜನೆಗಳ ಬಗ್ಗೆ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸಚಿವರ ಜತೆ ಚರ್ಚೆ ಮಾಡುತ್ತೇನೆ. ರಾಜ್ಯದ ಯೋಜನೆಗಳಿಗೆ ಕೇಂದ್ರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಇದೇ ವೇಳೆ ಪ್ರಸ್ತಾಪಿಸುತ್ತೇನೆ ಎಂದರು.

Tags:
error: Content is protected !!