ಬೆಂಗಳೂರು ; ಮೂರನೇ ಬಾರಿ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರನ್ನ ಭೇಟಿ ಮಾಡಲು ಜೂನ್ 29ರ ರಾತ್ರಿ 8 ಗಂಟೆಗೆ ಸಮಯ ನಿಗದಿಯಾಗಿರುವ ಹಿನ್ನೆಲೆ ಇಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಈ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ , ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದೆ. ಪ್ರಧಾನಿ ಹಾಗೂ ಕೇಂದ್ರದ ಹಲವು ಸಚಿವರ ಜತೆ ಮಾತುಕತೆ ನಡೆಸಲಿದ್ದೇನೆ. ಇದಕ್ಕಾಗಿ ಇಂದೇ ದೆಹಲಿಗೆ ತೆರಳಲಿದ್ದೇನೆ. ದೆಹಲಿಗೆ ತೆರಳುವ ಮುನ್ನ ಇಂದು ರಾಜ್ಯದ ಸಂಸದರ ಜೊತೆ ಸಭೆ ನಡೆಸುತ್ತೇನೆ. ರಾಜ್ಯಕ್ಕೆ ಬರಬೇಕಿರುವ ಅನುದಾನ, ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಸಂಗ್ರಹಲಿದ್ದೇನೆ ಎಂದು ತಿಳಿಸಿದರು.
ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಅನುಷ್ಠಾನಗೊಳಿಸಬೇಕಿರುವ ಯೋಜನೆಗಳ ಬಗ್ಗೆ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸಚಿವರ ಜತೆ ಚರ್ಚೆ ಮಾಡುತ್ತೇನೆ. ರಾಜ್ಯದ ಯೋಜನೆಗಳಿಗೆ ಕೇಂದ್ರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಇದೇ ವೇಳೆ ಪ್ರಸ್ತಾಪಿಸುತ್ತೇನೆ ಎಂದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…