Mysore
17
clear sky

Social Media

ಗುರುವಾರ, 05 ಫೆಬ್ರವರಿ 2026
Light
Dark

ಕಮಲ್‌ ಹಾಸನ್‌ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

cm siddaramaiah

ಬೆಂಗಳೂರು: ಬಹುಭಾಷಾ ನಟ ಕಮಲ್‌ ಹಾಸನ್‌ಗೆ ಕನ್ನಡದ ಇತಿಹಾಸ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಕಾಲಿವುಡ್‌ ನಟ ಕಮಲ್‌ ಹಾಸನ್‌ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಮಲ್‌ ಹಾಸನ್‌ ಕ್ಷಮೆ ಕೇಳುವಂತೆ ಒತ್ತಾಯ ಕೇಳಿಬರುತ್ತಿದೆ.

ಕಮಲ್‌ ಹಾಸನ್‌ ಉದ್ಧಟತನದ ಹೇಳಿಕೆ ನೀಡಿದ್ದು, ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬರ್ಥದಲ್ಲಿ ಅವರು ಮಾತನಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ:- ಕನ್ನಡದ ಬಗ್ಗೆ ಕಮಲ್‍ ಹಾಸನ್‍ ಹೇಳಿಕೆ; ಶುರುವಾಯ್ತು ‘ಬಾಯ್ಕಾಟ್‍ ಥಗ್‍ ಲೈಫ್‍’ ಅಭಿಯಾನ

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಟ ಕಮಲ್‌ ಹಾಸನ್‌ ಅವರಿಗೆ ಕನ್ನಡದ ಇತಿಹಾಸದ ಬಗ್ಗೆ ಗೊತ್ತಿಲ್ಲ. ಅದಕ್ಕೆ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಕಮಲ್‌ ಹಾಸನ್‌ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ.

Tags:
error: Content is protected !!