ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಚಿವ ಸ್ಥಾನದಿಂದ ವಜಾ ಮಾಡುವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಕ್ಯಾಬಿನೆಟ್ ಸಭೆ ನಡೆಯಿತು.
ಸಭೆಯಲ್ಲಿ ಸಚಿವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ, ನನ್ನ ಹಾಗೂ ಡಿ.ಕೆ.ಶಿವಕುಮಾರ್ ಅವರ ಜೊತೆ ಕೆ.ಸಿ.ವೇಣುಗೋಪಾಲ್ ಮಾತನಾಡಿದ್ದಾರೆ.
ನೀವು ಯಾರೂ ಕೂಡ ಇನ್ನು ಮುಂದೆ ಸಭೆ ಸೇರುವುದು, ಎಲ್ಲೆಂದರಲ್ಲಿ ಮಾತನಾಡುವುದು ಬೇಡ. ಮುಂದೆ ಅಂತಹ ಪರಿಸ್ಥಿತಿ ನಿರ್ಮಾಣವಾದರೆ ನೀವೇ ಜವಾಬ್ದಾರರು ಎಂದು ಎಚ್ಚರಿಕೆ ನೀಡಿದರು.
ಯಾರು ಪಕ್ಷದ ಶಿಸ್ತನ್ನು ಉಲ್ಲಂಘನೆ ಮಾಡ್ತಾರೋ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಇದನ್ನು ಕೆ.ಸಿ.ವೇಣುಗೋಪಾಲ್ ಹಾಗೂ ಸುರ್ಜೇವಾಲ ಇಬ್ಬರೂ ನನ್ನ ಗಮನಕ್ಕೆ ತಂದಿದ್ದಾರೆ ಎಂದು ಮಾಹಿತಿ ನೀಡಿದರು.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…