ರಾಜ್ಯ

ಸಿಎಂ ಸಿದ್ದರಾಮಯ್ಯ ತನಿಖೆ ಎದುರಿಸಲಿ, ಅವರು ಕ್ಲೀನ್ ಅಲ್ಲ: ಆರ್‌ ಅಶೋಕ್‌

ಬೆಂಗಳೂರು: ಮುಡಾ ಹಗರಣ ನಡೆಸಿದ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಸೋಮವಾರ ಬೆಳಗ್ಗೆ 11.30 ಕ್ಕೆ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಂದು (ಆಗಸ್ಟ್ 18) ಮಾತನಾಡಿದ ಅವರು, ಕಾಂಗ್ರೆಸ್ ನಡಿಗೆ, ಭ್ರಷ್ಟಾಚಾರದ ಕಡೆಗೆ ಎಂಬಂತಾಗಿದೆ. ಈ ಸರ್ಕಾರ ಬಂದಾಗ ಜನರು ಗ್ಯಾರಂಟಿಗಳ ಬಗ್ಗೆ ಭರವಸೆ ಇಟ್ಟುಕೊಂಡಿದ್ದರು. ಆದರೆ ಜನರ ಅಪೇಕ್ಷೆಗೆ ವಿರುದ್ಧವಾಗಿ ಸರ್ಕಾರ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ 65 ಕೇಸುಗಳಿದ್ದು, ಅದನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ. ಅಂದಮೇಲೆ ಅವರು ಹೇಗೆ ಕ್ಲೀನ್ ಎನ್ನುವುದು ತಿಳಿದಿಲ್ಲ. ಈಗ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್ ಸ್ವಾಗತ ಮಾಡಬೇಕಿತ್ತು‌. ತನಿಖೆಯಾಗಿ ಸ್ವಚ್ಛವಾಗಿ ಹೊರಬಂದರೆ ಕ್ಲೀನ್ ಎಂದು ನಂಬಬಹುದು. ಅದನ್ನು ಬಿಟ್ಟು ರಾಜ್ಯಾದ್ಯಂತ ಹೋರಾಟ ಮಾಡಲು ಮುಂದಾಗಿದ್ದಾರೆ ಎಂದು ಆಡಳಿತ ಪಕ್ಷದ ವಿರುದ್ಧ ದೂರಿದರು.

ಸಿಎಂ ಸಿದ್ದರಾಮಯ್ಯ ಅಧಿವೇಶನದಲ್ಲಿ ಉತ್ತರ ಕೊಡದೆ ಪಲಾಯನ ಮಾಡಿದ್ದಾರೆ. ಜೊತೆಗೆ ಪ್ರಕರಣ ಮುಚ್ಚಿಹಾಕಲು ಬೇಕಾದವರನ್ನು ನೇಮಿಸಿದ್ದಾರೆ. ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರ ಭ್ರಷ್ಟಾಚಾರವನ್ನು ಬೆಂಬಲಿಸಿದೆ. ಯಾವ ನೈತಿಕತೆ ಇಟ್ಟುಕೊಂಡು ಇವರು ಹೋರಾಟ ಮಾಡುತ್ತಾರೆ? ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್ ಸರ್ಕಾರ, ದೆಹಲಿ ಹೈಕಮಾಂಡ್ಗೆ ಎಟಿಎಂ ಆಗಿದೆ‌. ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಾಗ, ಎಲ್.ಕೆ.ಅಡ್ವಾಣಿ ಮೇಲೆ ಆರೋಪ ಬಂದಾಗ ರಾಜೀನಾಮೆ ಪಡೆಯಲಾಗಿತ್ತು. ಆದರೆ ಈ ಪರಂಪರೆ ಕಾಂಗ್ರೆಸ್ ಗಿಲ್ಲ. ಕಾಂಗ್ರೆಸ್ ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆ. ಅವರ ಅಜೆಂಡಾವೇ ಭ್ರಷ್ಟಾಚಾರ ಎಂದರು.

ಈಗ ಕಾಂಗ್ರೆಸ್ ಪಕ್ಷದ ಸರ್ಕಾರವೇ ಇದೆ. ಆದ್ದರಿಂದ ಯಾವುದೇ ಪ್ರಕರಣದ ತನಿಖೆ ಬೇಕಾದರೂ ಮಾಡಲಿ. ಮುಡಾ ಹಗರಣದಲ್ಲಿ ನಾನು ಯಾವುದಕ್ಕೂ ಸಹಿ ಹಾಕಿಲ್ಲ, ದಾಖಲೆ ನೋಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಅವರೇ 62 ಕೋಟಿ ರೂ. ಕೊಡಿ ಎಂದು ಹೇಳಿರುವಾಗ ಅದಕ್ಕಿಂತ ದೊಡ್ಡ ಸಾಕ್ಷಿ ಬೇಡ. ಸಿದ್ದರಾಮಯ್ಯ ಈಗ ಕಾನೂನಿಗೆ ತಲೆ ಬಾಗಬೇಕು. ಯಡಿಯೂರಪ್ಪ ಪ್ರಕರಣವೇ ಬೇರೆ, ಸಿದ್ದರಾಮಯ್ಯ ಪ್ರಕರಣವೇ ಬೇರೆ ಎಂದು ಕಾಂಗ್ರೆಸ್ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದರು.

ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಒಳಗೊಂದು ಹೊರಗೊಂದು ಎಂಬಂತೆ ಇದ್ದಾರೆ. ತಾವು ಸಿಎಂ ಆಗಬೇಕೆಂದೇ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಯಾರಾಗಬೇಕೆಂಬುದು ಅವರ ಪಕ್ಷಕ್ಕೆ ಬಿಟ್ಟ ನಿರ್ಧಾರ. ಮಲ್ಲಿಕಾರ್ಜುನ ಖರ್ಗೆಯವರು ಸುದೀರ್ಘ ರಾಜಕೀಯ ಹಿನ್ನೆಲೆ ಹಾಗೂ ಕಾನೂನು ಪ್ರಕಾರ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಹೇಳಿರುವುದು ಸರಿ ಇದೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

1 min ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

46 mins ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

1 hour ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

1 hour ago

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

2 hours ago

ತಮಿಳುನಾಡು ಚುನಾವಣೆ | ಸಿಎಂ ಸ್ಟಾಲಿನ್‌, ನಟ ವಿಜಯ್‌ ನಾಮತ್ರ ಸಲ್ಲಿಕೆ

ಚೆನ್ನೈ : ಏಪ್ರಿಲ್‌ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಮತ್ತು ಪ್ರತಿಸ್ಪರ್ಧಿ ಟಿವಿಕೆ…

3 hours ago