ರಾಜ್ಯ

ಸಿಎಂ ಸಿದ್ದರಾಮಯ್ಯ ತನಿಖೆ ಎದುರಿಸಲಿ, ಅವರು ಕ್ಲೀನ್ ಅಲ್ಲ: ಆರ್‌ ಅಶೋಕ್‌

ಬೆಂಗಳೂರು: ಮುಡಾ ಹಗರಣ ನಡೆಸಿದ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಸೋಮವಾರ ಬೆಳಗ್ಗೆ 11.30 ಕ್ಕೆ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿಂದು (ಆಗಸ್ಟ್ 18) ಮಾತನಾಡಿದ ಅವರು, ಕಾಂಗ್ರೆಸ್ ನಡಿಗೆ, ಭ್ರಷ್ಟಾಚಾರದ ಕಡೆಗೆ ಎಂಬಂತಾಗಿದೆ. ಈ ಸರ್ಕಾರ ಬಂದಾಗ ಜನರು ಗ್ಯಾರಂಟಿಗಳ ಬಗ್ಗೆ ಭರವಸೆ ಇಟ್ಟುಕೊಂಡಿದ್ದರು. ಆದರೆ ಜನರ ಅಪೇಕ್ಷೆಗೆ ವಿರುದ್ಧವಾಗಿ ಸರ್ಕಾರ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ 65 ಕೇಸುಗಳಿದ್ದು, ಅದನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ. ಅಂದಮೇಲೆ ಅವರು ಹೇಗೆ ಕ್ಲೀನ್ ಎನ್ನುವುದು ತಿಳಿದಿಲ್ಲ. ಈಗ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್ ಸ್ವಾಗತ ಮಾಡಬೇಕಿತ್ತು‌. ತನಿಖೆಯಾಗಿ ಸ್ವಚ್ಛವಾಗಿ ಹೊರಬಂದರೆ ಕ್ಲೀನ್ ಎಂದು ನಂಬಬಹುದು. ಅದನ್ನು ಬಿಟ್ಟು ರಾಜ್ಯಾದ್ಯಂತ ಹೋರಾಟ ಮಾಡಲು ಮುಂದಾಗಿದ್ದಾರೆ ಎಂದು ಆಡಳಿತ ಪಕ್ಷದ ವಿರುದ್ಧ ದೂರಿದರು.

ಸಿಎಂ ಸಿದ್ದರಾಮಯ್ಯ ಅಧಿವೇಶನದಲ್ಲಿ ಉತ್ತರ ಕೊಡದೆ ಪಲಾಯನ ಮಾಡಿದ್ದಾರೆ. ಜೊತೆಗೆ ಪ್ರಕರಣ ಮುಚ್ಚಿಹಾಕಲು ಬೇಕಾದವರನ್ನು ನೇಮಿಸಿದ್ದಾರೆ. ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರ ಭ್ರಷ್ಟಾಚಾರವನ್ನು ಬೆಂಬಲಿಸಿದೆ. ಯಾವ ನೈತಿಕತೆ ಇಟ್ಟುಕೊಂಡು ಇವರು ಹೋರಾಟ ಮಾಡುತ್ತಾರೆ? ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್ ಸರ್ಕಾರ, ದೆಹಲಿ ಹೈಕಮಾಂಡ್ಗೆ ಎಟಿಎಂ ಆಗಿದೆ‌. ಬಿ.ಎಸ್ ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಾಗ, ಎಲ್.ಕೆ.ಅಡ್ವಾಣಿ ಮೇಲೆ ಆರೋಪ ಬಂದಾಗ ರಾಜೀನಾಮೆ ಪಡೆಯಲಾಗಿತ್ತು. ಆದರೆ ಈ ಪರಂಪರೆ ಕಾಂಗ್ರೆಸ್ ಗಿಲ್ಲ. ಕಾಂಗ್ರೆಸ್ ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆ. ಅವರ ಅಜೆಂಡಾವೇ ಭ್ರಷ್ಟಾಚಾರ ಎಂದರು.

ಈಗ ಕಾಂಗ್ರೆಸ್ ಪಕ್ಷದ ಸರ್ಕಾರವೇ ಇದೆ. ಆದ್ದರಿಂದ ಯಾವುದೇ ಪ್ರಕರಣದ ತನಿಖೆ ಬೇಕಾದರೂ ಮಾಡಲಿ. ಮುಡಾ ಹಗರಣದಲ್ಲಿ ನಾನು ಯಾವುದಕ್ಕೂ ಸಹಿ ಹಾಕಿಲ್ಲ, ದಾಖಲೆ ನೋಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಅವರೇ 62 ಕೋಟಿ ರೂ. ಕೊಡಿ ಎಂದು ಹೇಳಿರುವಾಗ ಅದಕ್ಕಿಂತ ದೊಡ್ಡ ಸಾಕ್ಷಿ ಬೇಡ. ಸಿದ್ದರಾಮಯ್ಯ ಈಗ ಕಾನೂನಿಗೆ ತಲೆ ಬಾಗಬೇಕು. ಯಡಿಯೂರಪ್ಪ ಪ್ರಕರಣವೇ ಬೇರೆ, ಸಿದ್ದರಾಮಯ್ಯ ಪ್ರಕರಣವೇ ಬೇರೆ ಎಂದು ಕಾಂಗ್ರೆಸ್ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದರು.

ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಒಳಗೊಂದು ಹೊರಗೊಂದು ಎಂಬಂತೆ ಇದ್ದಾರೆ. ತಾವು ಸಿಎಂ ಆಗಬೇಕೆಂದೇ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಯಾರಾಗಬೇಕೆಂಬುದು ಅವರ ಪಕ್ಷಕ್ಕೆ ಬಿಟ್ಟ ನಿರ್ಧಾರ. ಮಲ್ಲಿಕಾರ್ಜುನ ಖರ್ಗೆಯವರು ಸುದೀರ್ಘ ರಾಜಕೀಯ ಹಿನ್ನೆಲೆ ಹಾಗೂ ಕಾನೂನು ಪ್ರಕಾರ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಹೇಳಿರುವುದು ಸರಿ ಇದೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago