ರಾಜ್ಯ

ವಕ್ಫ್‌ ವಿವಾದ ಬಿಜೆಪಿ ವಿರುದ್ಧವೇ ಸಿಎಂ ಸಿದ್ದರಾಮಯ್ಯ ಪ್ರತ್ಯಸ್ತ್ರ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪಯವರು ಸಿಎಂ ಆಗಿದ್ದಾಗ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರಿಗೆ ಬಿ.ವೈ.ವಿಜಯೇಂದ್ರ ಅವರು ವಕ್ಫ್‌ ಆಸ್ತಿ ಕಬಳಿಕೆಯಲ್ಲಿ ಆಮಿಷವೊಡ್ಡಿರುವುದು ರುಜುವಾತಾಗಿದೆ. ಹಾಗಾಗಿ ಪ್ರಧಾನಿ ಮೋದಿ ಅವರು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವಕ್ಫ್‌ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂ.ಆಮಿಷವೊಡ್ಡಿದ್ದರೆಂದು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ಮೋದಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಹೀಗಾಗಿ ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಫ್‌ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ ಎಂದು ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ನಾ ಖಾವೂಂಗಾ, ನಾ ಖಾನೆ ದೂಂಗಾ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ? ಎಂದು ಪ್ರಶ್ನಿಸಿದ್ದಾರೆ.

ವಿಜಯೇಂದ್ರ ಅವರು ವಕ್ಫ್‌ ಆಸ್ತಿ ವಿಚಾರದಲ್ಲಿ ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಫ್‌ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅಲ್ಲದೇ ಅವರೊಂದಿಗೆ ಬಿಜೆಪಿ ಪಕ್ಷದ ಕೆಲ ನಾಯಕರೂ ಸಹ ಷಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಫ್‌ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟೀಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಜೊತೆಗೆ ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಫ್‌ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ ಎಂದು ಆಗ್ರಹ ಮಾಡಿದ್ದಾರೆ.

ಆಶ್ಚರ್ಯದ ಸಂಗತಿಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್‌ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿತ್ತು ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago