ಬೆಂಗಳೂರು: ಹಿರಿಯ ಲೇಖಕಿ ಕಮಲಾ ಹಂಪನಾ(89) ಅವರು ಇಂದು(ಜೂ.22) ಬೆಳಗಿನ ಜಾವ ಹೃದಯಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದು, ಅವರ ಅನಿರೀಕ್ಷಿತ ಸಾವಿನಿಂದ ದು:ಖಿತನಾಗಿದ್ದೇನೆ ಎಂದರು.
ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48 ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ ಎಂದು ಹೇಳಿದರು.
ಪ್ರಾಕೃತ ಭಾಷೆಯ ಕುರಿತು ಸಂಶೋಧನೆ ಮಾಡಿದ್ದಾರೆ. ಬೆಂಗಳೂರು, ಮೈಸೂರು, ವಿಜಯನಗರಗಳಲ್ಲಿ ಕನ್ನಡ ಬೋಧಕರಾಗಿ ಕೆಲಸ ಮಾಡಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…