ರಾಜ್ಯ

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮುಡಾ ಸೈಟ್‌ ಹಂಚಿಕೆ ಪ್ರಕರಣ: ಜ.22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತು.

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮುಡಾ ಸೈಟ್‌ ಹಂಚಿಕೆ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್‌ ಸಲ್ಲಿಕೆ ಮಾಡಿರುವುದನ್ನು ಆಕ್ಷೇಪಿಸಿ ಸ್ನೇಹಮಯಿ ಕೃಷ್ಣ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ಇಂದು ನಡೆಯಿತು.

ಬಿ ರಿಪೋರ್ಟ್‌ ಸಂಬಂಧ ಜನವರಿ.22ರಂದು ಆದೇಶ ನೀಡುವುದಾಗಿ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ತಿಳಿಸಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

2 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

3 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

5 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

10 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

11 hours ago