ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷೆ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಗೌರಿ ಹಬ್ಬದಂದು ಚಾಲನೆ ನೀಡಲಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆ ಯಾವಾಗ ಪ್ರಾರಂಭವಾಗುತ್ತದೆ ಎಂದು ಕಾದು ಕುಳಿತಿವೆ.
ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಕೂಡ ಇದಕ್ಕೆ ಸಂಪೂರ್ಣ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಈಗಾಗಲೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೇನೆ ಎಂದರು.
ಈ ಯೋಜನೆ ಮೂಲಕ ನೀರನ್ನು ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದೆ. ಆ ಎಲ್ಲಾ ಸಮಸ್ಯೆಗಳನ್ನು ಸಹ ನಾವು ಬಗೆಹರಿಸಿದ್ದೇವೆ. ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿದೆ ಎಂದು ಮಾಹಿತಿ ನೀಡಿದರು.
ಗೌರಿ ಹಬ್ಬದಂದು ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಪಕ್ಷಭೇದ ಮರೆತು ಎಲ್ಲಾ ನಾಯಕರು ಹಾಗೂ ರೈತರಿಗೆ ಆಹ್ವಾನಿಸಿದ್ದೇವೆ. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೂ ಆಹ್ವಾನ ನೀಡುವಂತೆ ತಿಳಿಸಿದ್ದೇನೆ. ಈ ಪವಿತ್ರ ಕಾರ್ಯಕ್ಕೆ ಎಲ್ಲರೂ ಸಾಕ್ಷಿಯಾಗಬೇಕು ಎಂದು ಮನವಿ ಮಾಡಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…