ರಾಜ್ಯ

ಮೂರು ದಿನಗಳ ಹಂಪಿ ಉತ್ಸವಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

ವಿಜಯನಗರ : ಮೂರು ದಿನಗಳ ಹಂಪಿ ಉತ್ಸವಕ್ಕೆ ಇಂದು (ಫೆ. 2) ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾತ್ರಿ 8 ಗಂಟೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟದ ಹಲವು ಸಚಿವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಉತ್ಸವ ಉದ್ಘಾಟನೆ ನೆರವೇರಿಸಲಿದ್ದಾರೆ.

ವಿಜಯನಗರ ಜಿಲ್ಲಾಡಳಿತವು ಉತ್ಸವಕ್ಕೆ 17 ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಿದ್ದು, ರಾಜ್ಯದಿಂದ 14 ಕೋಟಿ ರೂ. ನೀಡಲಾಗುತ್ತಿದೆ. ಉಳಿದ ಹಣವನ್ನು ಸ್ಥಳೀಯವಾಗಿ ಹೊಂದಿಸಲಾಗಿದೆ.

ಫೆಬ್ರವರಿ 2, 3 ಮತ್ತು 4 ರಂದು ಗ್ರಾಮೀಣ ಕ್ರೀಡೆಗಳು, ರಂಗೋಲಿ ಸ್ಪರ್ಧೆಗಳು, ಸಂಗೀತ, ಸಾಹಸ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮುಖ್ಯ ಕಾರ್ಯಕ್ರಮದ ಪೂರ್ವಭಾವಿಯಾಗಿ ಕಳೆದ ವಾರ ಜಿಲ್ಲಾಡಳಿತದ ವತಿಯಿಂದ ಬೈಕ್ ರ‍್ಯಾಲಿ, ತುಂಗಾ ಆರತಿ, ವಿವಿಧ ಕಲೆಗಳ ಪ್ರದರ್ಶನದಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಏಕಕಾಲದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಾಲ್ಕು ದೊಡ್ಡ ವೇದಿಕೆಗಳನ್ನು ರಚಿಸಲಾಗಿದೆ. ಹಂಪಿ ಉತ್ಸವದ ಸಂದರ್ಭದಲ್ಲಿ ಹಲವಾರು ಪ್ರಸಿದ್ಧ ಗಾಯಕರು ಮತ್ತು ಸಂಗೀತಗಾರರು ಪ್ರದರ್ಶನ ನೀಡಲಿದ್ದಾರೆ.

ಹೊಸಪೇಟೆ ರಸ್ತೆಯಲ್ಲಿ ವಿದ್ಯುತ್ ದೀಪಗಳ ಅಲಂಕಾರ
ಮೂರು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಪ್ರತಿಭೆಯನ್ನು ಪ್ರದರ್ಶಿಸಲು ವಿವಿಧ ಸಾಂಸ್ಕೃತಿಕ ತಂಡಗಳನ್ನು ನಿಯೋಜಿಸಲಾಗಿದೆ. ಹೊಸಪೇಟೆಯ ರಸ್ತೆಗಳಲ್ಲಿ ವಿಶೇಷ ಬೆಳಕಿನ ವ್ಯವಸ್ಥೆ ಮಾಡಲಾಗಿದ್ದು, ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿದೆ. ಈ ಹಿಂದೆ ಪ್ರತಿ ವರ್ಷ ನವೆಂಬರ್ 3, 4 ಮತ್ತು 5 ರಂದು ಹಂಪಿ ಉತ್ಸವ ನಡೆಯುತ್ತಿತ್ತು. ಆದರೆ ಸರ್ಕಾರಗಳು ಬದಲಾದಂತೆ ದಿನಾಂಕಗಳನ್ನು ಸಹ ಬದಲಾಯಿಸಲಾಗಿದೆ.

ಹೆಲಿ ರೈಡ್ ವ್ಯವಸ್ಥೆ
ವಿಜಯನಗರ ಸಾಮ್ರಾಜ್ಯದ ಕುರುಹುಗಳನ್ನು ಆಕಾಶದಿಂದ ನೋಡಿ ಆನಂದಿಸಲು ಇಚ್ಛಿಸುವ ಪ್ರವಾಸಿಗರಿಗೆ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪ್ರಯಾಣಿಕರಿಗೆ 4,229 ರೂ. ನಿಗದಿಪಡಿಸಲಾಗಿದೆ. ಹೆಲಿಕಾಪ್ಟರ್ ರೈಡ್​ಗೆ ಪ್ರತಿ ಬಾರಿ ಐದರಿಂದ ಆರು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲಾಗುತ್ತದೆ.

ಪ್ರವಾಸಿಗರ ಬೇಡಿಕೆ ಆಧಾರದ ಮೇಲೆ ಹೆಚ್ಚುವರಿ ಬಸ್‌ ಸೇವೆ ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

1 hour ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

2 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

3 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

3 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

3 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

4 hours ago