ರಾಜ್ಯ

ಮೂರು ದಿನಗಳ ಹಂಪಿ ಉತ್ಸವಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

ವಿಜಯನಗರ : ಮೂರು ದಿನಗಳ ಹಂಪಿ ಉತ್ಸವಕ್ಕೆ ಇಂದು (ಫೆ. 2) ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾತ್ರಿ 8 ಗಂಟೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟದ ಹಲವು ಸಚಿವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಉತ್ಸವ ಉದ್ಘಾಟನೆ ನೆರವೇರಿಸಲಿದ್ದಾರೆ.

ವಿಜಯನಗರ ಜಿಲ್ಲಾಡಳಿತವು ಉತ್ಸವಕ್ಕೆ 17 ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಿದ್ದು, ರಾಜ್ಯದಿಂದ 14 ಕೋಟಿ ರೂ. ನೀಡಲಾಗುತ್ತಿದೆ. ಉಳಿದ ಹಣವನ್ನು ಸ್ಥಳೀಯವಾಗಿ ಹೊಂದಿಸಲಾಗಿದೆ.

ಫೆಬ್ರವರಿ 2, 3 ಮತ್ತು 4 ರಂದು ಗ್ರಾಮೀಣ ಕ್ರೀಡೆಗಳು, ರಂಗೋಲಿ ಸ್ಪರ್ಧೆಗಳು, ಸಂಗೀತ, ಸಾಹಸ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮುಖ್ಯ ಕಾರ್ಯಕ್ರಮದ ಪೂರ್ವಭಾವಿಯಾಗಿ ಕಳೆದ ವಾರ ಜಿಲ್ಲಾಡಳಿತದ ವತಿಯಿಂದ ಬೈಕ್ ರ‍್ಯಾಲಿ, ತುಂಗಾ ಆರತಿ, ವಿವಿಧ ಕಲೆಗಳ ಪ್ರದರ್ಶನದಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಏಕಕಾಲದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಾಲ್ಕು ದೊಡ್ಡ ವೇದಿಕೆಗಳನ್ನು ರಚಿಸಲಾಗಿದೆ. ಹಂಪಿ ಉತ್ಸವದ ಸಂದರ್ಭದಲ್ಲಿ ಹಲವಾರು ಪ್ರಸಿದ್ಧ ಗಾಯಕರು ಮತ್ತು ಸಂಗೀತಗಾರರು ಪ್ರದರ್ಶನ ನೀಡಲಿದ್ದಾರೆ.

ಹೊಸಪೇಟೆ ರಸ್ತೆಯಲ್ಲಿ ವಿದ್ಯುತ್ ದೀಪಗಳ ಅಲಂಕಾರ
ಮೂರು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಪ್ರತಿಭೆಯನ್ನು ಪ್ರದರ್ಶಿಸಲು ವಿವಿಧ ಸಾಂಸ್ಕೃತಿಕ ತಂಡಗಳನ್ನು ನಿಯೋಜಿಸಲಾಗಿದೆ. ಹೊಸಪೇಟೆಯ ರಸ್ತೆಗಳಲ್ಲಿ ವಿಶೇಷ ಬೆಳಕಿನ ವ್ಯವಸ್ಥೆ ಮಾಡಲಾಗಿದ್ದು, ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿದೆ. ಈ ಹಿಂದೆ ಪ್ರತಿ ವರ್ಷ ನವೆಂಬರ್ 3, 4 ಮತ್ತು 5 ರಂದು ಹಂಪಿ ಉತ್ಸವ ನಡೆಯುತ್ತಿತ್ತು. ಆದರೆ ಸರ್ಕಾರಗಳು ಬದಲಾದಂತೆ ದಿನಾಂಕಗಳನ್ನು ಸಹ ಬದಲಾಯಿಸಲಾಗಿದೆ.

ಹೆಲಿ ರೈಡ್ ವ್ಯವಸ್ಥೆ
ವಿಜಯನಗರ ಸಾಮ್ರಾಜ್ಯದ ಕುರುಹುಗಳನ್ನು ಆಕಾಶದಿಂದ ನೋಡಿ ಆನಂದಿಸಲು ಇಚ್ಛಿಸುವ ಪ್ರವಾಸಿಗರಿಗೆ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪ್ರಯಾಣಿಕರಿಗೆ 4,229 ರೂ. ನಿಗದಿಪಡಿಸಲಾಗಿದೆ. ಹೆಲಿಕಾಪ್ಟರ್ ರೈಡ್​ಗೆ ಪ್ರತಿ ಬಾರಿ ಐದರಿಂದ ಆರು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲಾಗುತ್ತದೆ.

ಪ್ರವಾಸಿಗರ ಬೇಡಿಕೆ ಆಧಾರದ ಮೇಲೆ ಹೆಚ್ಚುವರಿ ಬಸ್‌ ಸೇವೆ ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.

andolanait

Recent Posts

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

2 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

2 hours ago

ಶಿಕ್ಷಕರ ನೇಮಕಾತಿ ಶೀಘ್ರ : ಸಿಎಂ ಭರವಸೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…

2 hours ago

ಒಕ್ಕಲಿಗರ ಮೇಲೆ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ ಎಂದು ಸಿದ್ದರಾಮಯ್ಯ ಕಾಲೆಳೆದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…

3 hours ago

ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…

3 hours ago

ʻಮನ್‌ ಕಿ ಬಾತ್‌ʼನಲ್ಲಿ ಕರ್ನಾಟಕದ ರೈತರನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…

3 hours ago