ರಾಜ್ಯ

ಮೂರು ದಿನಗಳ ಹಂಪಿ ಉತ್ಸವಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ

ವಿಜಯನಗರ : ಮೂರು ದಿನಗಳ ಹಂಪಿ ಉತ್ಸವಕ್ಕೆ ಇಂದು (ಫೆ. 2) ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾತ್ರಿ 8 ಗಂಟೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟದ ಹಲವು ಸಚಿವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಉತ್ಸವ ಉದ್ಘಾಟನೆ ನೆರವೇರಿಸಲಿದ್ದಾರೆ.

ವಿಜಯನಗರ ಜಿಲ್ಲಾಡಳಿತವು ಉತ್ಸವಕ್ಕೆ 17 ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಿದ್ದು, ರಾಜ್ಯದಿಂದ 14 ಕೋಟಿ ರೂ. ನೀಡಲಾಗುತ್ತಿದೆ. ಉಳಿದ ಹಣವನ್ನು ಸ್ಥಳೀಯವಾಗಿ ಹೊಂದಿಸಲಾಗಿದೆ.

ಫೆಬ್ರವರಿ 2, 3 ಮತ್ತು 4 ರಂದು ಗ್ರಾಮೀಣ ಕ್ರೀಡೆಗಳು, ರಂಗೋಲಿ ಸ್ಪರ್ಧೆಗಳು, ಸಂಗೀತ, ಸಾಹಸ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮುಖ್ಯ ಕಾರ್ಯಕ್ರಮದ ಪೂರ್ವಭಾವಿಯಾಗಿ ಕಳೆದ ವಾರ ಜಿಲ್ಲಾಡಳಿತದ ವತಿಯಿಂದ ಬೈಕ್ ರ‍್ಯಾಲಿ, ತುಂಗಾ ಆರತಿ, ವಿವಿಧ ಕಲೆಗಳ ಪ್ರದರ್ಶನದಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಏಕಕಾಲದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಾಲ್ಕು ದೊಡ್ಡ ವೇದಿಕೆಗಳನ್ನು ರಚಿಸಲಾಗಿದೆ. ಹಂಪಿ ಉತ್ಸವದ ಸಂದರ್ಭದಲ್ಲಿ ಹಲವಾರು ಪ್ರಸಿದ್ಧ ಗಾಯಕರು ಮತ್ತು ಸಂಗೀತಗಾರರು ಪ್ರದರ್ಶನ ನೀಡಲಿದ್ದಾರೆ.

ಹೊಸಪೇಟೆ ರಸ್ತೆಯಲ್ಲಿ ವಿದ್ಯುತ್ ದೀಪಗಳ ಅಲಂಕಾರ
ಮೂರು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಪ್ರತಿಭೆಯನ್ನು ಪ್ರದರ್ಶಿಸಲು ವಿವಿಧ ಸಾಂಸ್ಕೃತಿಕ ತಂಡಗಳನ್ನು ನಿಯೋಜಿಸಲಾಗಿದೆ. ಹೊಸಪೇಟೆಯ ರಸ್ತೆಗಳಲ್ಲಿ ವಿಶೇಷ ಬೆಳಕಿನ ವ್ಯವಸ್ಥೆ ಮಾಡಲಾಗಿದ್ದು, ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗಿದೆ. ಈ ಹಿಂದೆ ಪ್ರತಿ ವರ್ಷ ನವೆಂಬರ್ 3, 4 ಮತ್ತು 5 ರಂದು ಹಂಪಿ ಉತ್ಸವ ನಡೆಯುತ್ತಿತ್ತು. ಆದರೆ ಸರ್ಕಾರಗಳು ಬದಲಾದಂತೆ ದಿನಾಂಕಗಳನ್ನು ಸಹ ಬದಲಾಯಿಸಲಾಗಿದೆ.

ಹೆಲಿ ರೈಡ್ ವ್ಯವಸ್ಥೆ
ವಿಜಯನಗರ ಸಾಮ್ರಾಜ್ಯದ ಕುರುಹುಗಳನ್ನು ಆಕಾಶದಿಂದ ನೋಡಿ ಆನಂದಿಸಲು ಇಚ್ಛಿಸುವ ಪ್ರವಾಸಿಗರಿಗೆ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪ್ರಯಾಣಿಕರಿಗೆ 4,229 ರೂ. ನಿಗದಿಪಡಿಸಲಾಗಿದೆ. ಹೆಲಿಕಾಪ್ಟರ್ ರೈಡ್​ಗೆ ಪ್ರತಿ ಬಾರಿ ಐದರಿಂದ ಆರು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲಾಗುತ್ತದೆ.

ಪ್ರವಾಸಿಗರ ಬೇಡಿಕೆ ಆಧಾರದ ಮೇಲೆ ಹೆಚ್ಚುವರಿ ಬಸ್‌ ಸೇವೆ ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 mins ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

18 mins ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

23 mins ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

1 hour ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

10 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

11 hours ago