ಬೆಂಗಳೂರು: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ನಾಡಬಂಧುಗಳಿಗೆ ದೀಪಾವಳಿ ಹಬ್ಬದ ಶುಭಾಶಯಗಳು, ಕತ್ತಲಿನಿಂದ ಬೆಳಕಿನ ಹಾದಿ ತೋರುವ ಈ ಹಬ್ಬವು ಸಮಾಜವನ್ನು ಬಾಧಿಸುತ್ತಿರುವ ದ್ವೇಷ, ಹಿಂಸೆ, ಅಸತ್ಯ, ಅಶಾಂತಿ, ಬಡತನ, ಅಜ್ಞಾನಗಳ ಅಂಧಕಾರವನ್ನು ಸರಿಸಿ, ಸ್ನೇಹ, ಸಹಬಾಳ್ವೆ, ಸತ್ಯ, ನೆಮ್ಮದಿ, ಸುಜ್ಞಾನದ ಬೆಳಕನ್ನು ಎಲ್ಲೆಡೆ ಬೆಳಗಿಸಲಿ ಎಂದು ಹಾರೈಸುತ್ತೇನೆ. ಹಬ್ಬದ ಸಂಭ್ರಮದ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರಿ. ಹಸಿರು ಪಟಾಕಿಗಳನ್ನೇ ಬಳಸಿ. ಎಳೆಯ ಮಕ್ಕಳು ಪಟಾಕಿ ಸಿಡಿಸುವಅಗ ಹಿರಿಯರು ಅವರ ಬಗ್ಗೆ ಜಾಗ್ರತೆ ವಹಿಸಿ. ದೀಪಾವಳಿಯನ್ನು ಸಂಭ್ರಮದಿಂದಲೂ, ಸುರಕ್ಷಿತವಾಗಿಯೂ ಆಚರಿಸಿ ಎಂದು ವಿನಂತಿಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ದೀಪಾವಳಿಯ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…