ಬೆಂಗಳೂರು: ಕಳಸಾ-ಬಂಡೂರಿ ಯೋಜನೆಗೆ ಶೀಘ್ರದಲ್ಲೇ ಅನುಮತಿ ನೀಡುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ-ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಬೇಕು.
ಈ ಬಗ್ಗೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರು, ಮಂಡಳಿಯ ಅಧ್ಯಕ್ಷರಾಗಿರುವ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ, ಯೋಜನೆಯ ಬಗ್ಗೆ ಸವಿವರವಾಗಿ ಬರೆದಿದ್ದಾರೆ.
ನೀವು ಅಧ್ಯಕ್ಷರಾಗಿರುವ ವನ್ಯಜೀವಿ ರಾಷ್ಟ್ರೀಯ ಮಂಡಳಿಯು ಯೋಜನೆಗೆ ಅಗತ್ಯ ಅನುಮತಿಯನ್ನು ನೀಡಿಲ್ಲ. ಗೋವಾದ ಮುಖ್ಯ ವನ್ಯಜೀವಿ ವಾರ್ಡನ್ ಕಳಸಾ ಬಂಡೂರಿನಲ್ಲಿ ಕರ್ನಾಟಕ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳದಂತೆ ಕಾನೂನು ಬಾಹಿರ ಆದೇಶ ಹೊರಡಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಆದ್ದರಿಂದ ಆದಷ್ಟು ಬೇಗ ಈ ಯೋಜನೆಗೆ ಅನುಮತಿ ನೀಡಿ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…